ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸಲಹೆಗಾರರಾಗಿ ಬೇಳೂರು ಸುದರ್ಶನ ನೇಮಕ

Last Updated 4 ಡಿಸೆಂಬರ್ 2021, 16:08 IST
ಅಕ್ಷರ ಗಾತ್ರ

ಬೆಂಗಳೂರು: ಪತ್ರಕರ್ತ ಬೇಳೂರು ಸುದರ್ಶನ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇ–ಆಡಳಿತ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಶನಿವಾರ ಆದೇಶ ಹೊರಡಿಸಿದ್ದು, ಅವರಿಗೆ ರಾಜ್ಯ ಸಚಿವರ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ಬೇಳೂರು ಸುದರ್ಶನ ಹಿಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೂ ಇ–ಆಡಳಿತ ಸಲಹೆಗಾರರಾಗಿದ್ದರು. ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೇರಿದ ಬಳಿಕ ಅವರನ್ನು ಮುಖ್ಯಮಂತ್ರಿಯವರ ಸಚಿವಾಲಯದಿಂದ ಕೈಬಿಡಲಾಗಿತ್ತು. ಈಗ ಪುನಃ ಸಲಹೆಗಾರರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT