ನರಸಿಂಹಗೆ ‘ಬೇಂದ್ರೆ ಸಾಹಿತ್ಯ ಸೇವಾ ಪ್ರಶಸ್ತಿ’

ಬೆಂಗಳೂರು: ದ.ರಾ. ಬೇಂದ್ರೆ ಕಾವ್ಯ ಕೂಟ ನೀಡುವ ‘ದ.ರಾ. ಬೇಂದ್ರೆ ಸಾಹಿತ್ಯ ಸೇವಾ ಪ್ರಶಸ್ತಿ’ಗೆ ಉದಯಭಾನು ಕಲಾಸಂಘದ ಕಾರ್ಯದರ್ಶಿ ಎಂ. ನರಸಿಂಹ ಆಯ್ಕೆಯಾಗಿದ್ದಾರೆ.
ಕೂಟವು ಇದೇ ಮೊದಲ ಬಾರಿ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಇದೇ 31ರಂದು ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಬೇಂದ್ರೆ ಅವರ 127ನೇ ಜನ್ಮದಿನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೂಟದ ಅಧ್ಯಕ್ಷ ಜಿ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.