ಬಿಬಿಎಂಪಿ ಮೀಸಲಾತಿ ಪಟ್ಟಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಶುಕ್ರವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಮೀಸಲಾತಿ ಪಟ್ಟಿ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ್ದು, ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ.