ಪ್ರದೀಪ್ ಬ್ಯಾಂಕ್ ಖಾತೆಯ ವಿವರಗಳನ್ನು ಪೊಲೀಸರು ಪಡೆದಿದ್ದು, ಯಾರಿಗೆಲ್ಲ ಹಣ ಸಂದಾಯ ಆಗಿತ್ತು ಮತ್ತು ಯಾರಿಂದ ಎಷ್ಟು ಹಣ ವಾಪಸ್ ಬಂದಿತ್ತು ಎಂಬ ಮಾಹಿತಿ ಕಲೆ ಹಾಕಿದ್ದಾರೆ. ಇದೊಂದು ಸಿವಿಲ್ ವ್ಯಾಜ್ಯದ ರೀತಿ ಇರುವುದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಪ್ರದೀಪ್ ಹಾಗೂ ಗೋಪಿ, ಸೋಮಯ್ಯ ಕ್ಲಬ್ ವೊಂದರ ಪಾಲುದಾರರಾಗಿದ್ದರು. ಕೋವಿಡ್ ಸಂದರ್ಭ ಕ್ಲಬ್ನ ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದು, ಈ ಕಾರಣಕ್ಕೆ ಪ್ರದೀಪ್ಗೆ ಹಣ ಸಂದಾಯ ಆಗಿರಲಿಲ್ಲ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.