<p><strong>ಬೆಂಗಳೂರು: </strong>ಕೋವಿಡ್ ಪೀಡಿತರಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೇ ಪರದಾಡಿದ ಘಟನೆ ನಡೆದಿದೆ.</p>.<p>ಬಸವಕಲ್ಯಾಣ ಚುನಾವಣಾ ಪ್ರಚಾರ ಮುಗಿಸಿ ಬಂದ ಅವರ ಆರೋಗ್ಯ ವ್ಯತ್ಯಯವಾಗಿದ್ದರಿಂದಾಗಿ ಬೆಂಗಳೂರಿಗೆ ವಾಪಾಸ್ ಆದವರು ಮನೆಗೆ ಹೋಗದೇ ಹೋಟೆಲ್ನಲ್ಲೇ ಉಳಿದುಕೊಂಡಿದ್ದರು. ಶನಿವಾರ ಬೆಳಿಗ್ಗೆ ಆರೋಗ್ಯ ತಪಾಸಣೆಗೆ ಒಳಗಾದಾಗ ಕೋವಿಡ್ ದೃಢ ಪಟ್ಟಿದೆ. ವೈದ್ಯರನ್ನು ಸಂಪರ್ಕಿಸಿದಾಗ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ.</p>.<p>ಆಸ್ಪತ್ರೆ ಸಂಪರ್ಕಿಸಿದಾಗ ಬೆಡ್ ಲಭ್ಯವಿಲ್ಲ ಎಂಬ ಮಾಹಿತಿ ಬಂದ ಬಳಿಕ, ತೋಟದ ಮನೆಯಲ್ಲಿ ಪ್ರತ್ಯೇಕವಾಸ ಮಾಡಬಹುದೇ ಎಂದು ವೈದ್ಯರ ಸಲಹೆ ಕೇಳಿದ್ಧಾರೆ. ಅದಕ್ಕೆ ಅವರ ಕುಟುಂಬ ವೈದ್ಯರು ಒಪ್ಪಿಗೆ ನೀಡಿಲ್ಲ.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/covid19-karnataka-cm-bs-yediyurappa-health-condition-manipal-hospital-823038.html" target="_blank">ಕೋವಿಡ್: ಮುಖ್ಯಮಂತ್ರಿ ಬಿಎಸ್ವೈ ಆರೋಗ್ಯ ಸ್ಥಿರ</a></p>.<p>ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಇರುವ ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಲ್ಲದೇ , ಖಾಸಗಿ ಆಸ್ಪತ್ರೆಯೊಂದಕ್ಕೆ ಮಾತನಾಡಿ ಬೆಡ್ ವ್ಯವಸ್ಥೆ ಮಾಡಿರುವುದಾಗಿ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಪೀಡಿತರಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೇ ಪರದಾಡಿದ ಘಟನೆ ನಡೆದಿದೆ.</p>.<p>ಬಸವಕಲ್ಯಾಣ ಚುನಾವಣಾ ಪ್ರಚಾರ ಮುಗಿಸಿ ಬಂದ ಅವರ ಆರೋಗ್ಯ ವ್ಯತ್ಯಯವಾಗಿದ್ದರಿಂದಾಗಿ ಬೆಂಗಳೂರಿಗೆ ವಾಪಾಸ್ ಆದವರು ಮನೆಗೆ ಹೋಗದೇ ಹೋಟೆಲ್ನಲ್ಲೇ ಉಳಿದುಕೊಂಡಿದ್ದರು. ಶನಿವಾರ ಬೆಳಿಗ್ಗೆ ಆರೋಗ್ಯ ತಪಾಸಣೆಗೆ ಒಳಗಾದಾಗ ಕೋವಿಡ್ ದೃಢ ಪಟ್ಟಿದೆ. ವೈದ್ಯರನ್ನು ಸಂಪರ್ಕಿಸಿದಾಗ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ.</p>.<p>ಆಸ್ಪತ್ರೆ ಸಂಪರ್ಕಿಸಿದಾಗ ಬೆಡ್ ಲಭ್ಯವಿಲ್ಲ ಎಂಬ ಮಾಹಿತಿ ಬಂದ ಬಳಿಕ, ತೋಟದ ಮನೆಯಲ್ಲಿ ಪ್ರತ್ಯೇಕವಾಸ ಮಾಡಬಹುದೇ ಎಂದು ವೈದ್ಯರ ಸಲಹೆ ಕೇಳಿದ್ಧಾರೆ. ಅದಕ್ಕೆ ಅವರ ಕುಟುಂಬ ವೈದ್ಯರು ಒಪ್ಪಿಗೆ ನೀಡಿಲ್ಲ.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/covid19-karnataka-cm-bs-yediyurappa-health-condition-manipal-hospital-823038.html" target="_blank">ಕೋವಿಡ್: ಮುಖ್ಯಮಂತ್ರಿ ಬಿಎಸ್ವೈ ಆರೋಗ್ಯ ಸ್ಥಿರ</a></p>.<p>ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಇರುವ ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಲ್ಲದೇ , ಖಾಸಗಿ ಆಸ್ಪತ್ರೆಯೊಂದಕ್ಕೆ ಮಾತನಾಡಿ ಬೆಡ್ ವ್ಯವಸ್ಥೆ ಮಾಡಿರುವುದಾಗಿ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>