ಈ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ.ರವಿ, ‘ಚಂದ್ರು ಹತ್ಯೆ ವಿಚಾರದಲ್ಲಿ ಸಮಗ್ರ ತನಿಖೆ ಆಗಬೇಕು. ಹತ್ಯೆಗೀಡಾದ ಚಂದ್ರು ಅವರ ಸಹೋದರ ನವೀನ್ ನಮ್ಮ ಪಕ್ಷದ ಬೂತ್ ಸಮಿತಿ ಕಾರ್ಯದರ್ಶಿ. ಏಕಾಏಕಿ ಹತ್ಯೆ ನಡೆದಿದೆ. ಯಾರೂ ನೆರವಿಗೆ ಬರಲಿಲ್ಲ. ಇಲ್ಲಿ ಪೂರ್ವದ್ವೇಷ ಇರಲಿಲ್ಲ. ಬೈಕ್ ತಾಗಿದ್ದನ್ನೇ ನೆಪ ಮಾಡಿ, ಕನ್ನಡ ಮತ್ತು ತಮಿಳು ಮಾತ್ರ ಬರುವುದಾಗಿ ಹೇಳಿದ ಚಂದ್ರುವನ್ನು ಕೊಲೆ ಮಾಡಿದ್ದಾರೆ ಎಂದು ಅವರ ಮನೆಯವರೇ ಹೇಳಿದ್ದಾರೆ’ ಎಂದು ವಿವರಿಸಿದರು.