‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಗನಾಗಿರುವ ಆದಿತ್ಯ ಅವರಿಗೆ ಆರೋಪಿಯು ಇದೇ 8ರಂದು ದೂರವಾಣಿ ಕರೆ ಮಾಡಿದ್ದ. ಅದನ್ನು ಅವರು ಸ್ವೀಕರಿಸಿರಲಿಲ್ಲ. ಇದರಿಂದ ಕೆರಳಿದ್ದ ಆತ ಅವರ ಮೊಬೈಲ್ಗೆ ಬೆದರಿಕೆ ಸಂದೇಶಗಳನ್ನು ರವಾನಿಸಿದ್ದ. ಮೊಬೈಲ್ ನೆಟ್ವರ್ಕ್ ಪರಿಶೀಲಿಸಿದಾಗ ಆರೋಪಿಯು ಬೆಂಗಳೂರಿನಲ್ಲಿ ನೆಲೆಸಿರುವುದು ಗೊತ್ತಾಗಿತ್ತು. ಹೀಗಾಗಿ ಮುಂಬೈ ಪೊಲೀಸರ ತಂಡವೊಂದು ನಗರಕ್ಕೆ ಬಂದು ಆತನನ್ನು ಬಂಧಿಸಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.