<p><strong>ನವದೆಹಲಿ:</strong> ‘ನಮ್ಮ ಮೆಟ್ರೊ’ ರೈಲು ಯೋಜನೆಯ 2ಎ ಮತ್ತು 2ಬಿ ಹಂತಗಳ ಎತ್ತರಿಸಿದ ಮಾರ್ಗಗಳ ಕಾಮಗಾರಿಗೆ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.</p>.<p>ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರವರೆಗಿನ 2ಎ ಹಂತ ಹಾಗೂ ಕೆ.ಆರ್.ಪುರದಿಂದ ಹೆಬ್ಬಾಳ ಮೂಲಕ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 2ಬಿ ಹಂತಗಳಲ್ಲಿ ಒಟ್ಟು 58.19 ಕಿ.ಮೀ ಉದ್ದದ ಎತ್ತರಿಸಿದ ಮಾರ್ಗ ನಿರ್ಮಾಣವಾಗಲಿದೆ. ಈ ಎರಡು ಹಂತಗಳ ಕಾಮಗಾರಿಗಳಿಗೆ ಒಟ್ಟು ₹ 14,788 ಕೋಟಿ ವೆಚ್ಚವಾಗಲಿದೆ.</p>.<p>ಬೆಂಗಳೂರು ಮೆಟ್ರೊ ರೈಲು ನಿಗಮವು ಅನುಷ್ಠಾನ ಗೊಳಿಸುತ್ತಿರುವ ಈ ಯೋಜನೆಗೆ ಕೇಂದ್ರದ ಪಾಲಿನ ಅನುದಾನ ಒದಗಿಸುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021–22ನೇ ಸಾಲಿನ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಈ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರಲಿಲ್ಲ.</p>.<p>ಈ ಯೋಜನೆಯ ಅನುಷ್ಠಾನದಿಂದ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಸುಗಮಗೊಳ್ಳಲಿದ್ದು, ಸಾರ್ವಜನಿಕರ ಬಹು ದಿನಗಳ ಕನಸು ನನಸಾಗಲಿದೆ. ಹೆಚ್ಚುವರಿ ಸಾರಿಗೆ ಸೌಲಭ್ಯದೊಂದಿಗೆ ನಗರದ ಸಂಚಾರ ದಟ್ಟಣೆ ನೀಗಿಸಲು ನೆರವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನಮ್ಮ ಮೆಟ್ರೊ’ ರೈಲು ಯೋಜನೆಯ 2ಎ ಮತ್ತು 2ಬಿ ಹಂತಗಳ ಎತ್ತರಿಸಿದ ಮಾರ್ಗಗಳ ಕಾಮಗಾರಿಗೆ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.</p>.<p>ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರವರೆಗಿನ 2ಎ ಹಂತ ಹಾಗೂ ಕೆ.ಆರ್.ಪುರದಿಂದ ಹೆಬ್ಬಾಳ ಮೂಲಕ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 2ಬಿ ಹಂತಗಳಲ್ಲಿ ಒಟ್ಟು 58.19 ಕಿ.ಮೀ ಉದ್ದದ ಎತ್ತರಿಸಿದ ಮಾರ್ಗ ನಿರ್ಮಾಣವಾಗಲಿದೆ. ಈ ಎರಡು ಹಂತಗಳ ಕಾಮಗಾರಿಗಳಿಗೆ ಒಟ್ಟು ₹ 14,788 ಕೋಟಿ ವೆಚ್ಚವಾಗಲಿದೆ.</p>.<p>ಬೆಂಗಳೂರು ಮೆಟ್ರೊ ರೈಲು ನಿಗಮವು ಅನುಷ್ಠಾನ ಗೊಳಿಸುತ್ತಿರುವ ಈ ಯೋಜನೆಗೆ ಕೇಂದ್ರದ ಪಾಲಿನ ಅನುದಾನ ಒದಗಿಸುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021–22ನೇ ಸಾಲಿನ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಈ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರಲಿಲ್ಲ.</p>.<p>ಈ ಯೋಜನೆಯ ಅನುಷ್ಠಾನದಿಂದ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಸುಗಮಗೊಳ್ಳಲಿದ್ದು, ಸಾರ್ವಜನಿಕರ ಬಹು ದಿನಗಳ ಕನಸು ನನಸಾಗಲಿದೆ. ಹೆಚ್ಚುವರಿ ಸಾರಿಗೆ ಸೌಲಭ್ಯದೊಂದಿಗೆ ನಗರದ ಸಂಚಾರ ದಟ್ಟಣೆ ನೀಗಿಸಲು ನೆರವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>