<p><strong>ರಾಮನಗರ:</strong> ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇ ಟೋಲ್ ದರ ಹೆಚ್ಚಳವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶನಿವಾರ ಹಿಂಪಡೆದಿದೆ.</p>.<p>ಟೋಲ್ ದರವನ್ನು ಶನಿವಾರದಿಂದ (ಏ.1) ಅನ್ವಯವಾಗುವಂತೆ ಶೇ 22ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿತ್ತು.</p>.<p>ವಾಹನಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಕನಿಷ್ಠ ₹ 35ರಿಂದ ಗರಿಷ್ಠ ₹350ರವರೆಗೆ ಟೋಲ್ ಶುಲ್ಕ ಏರಿತ್ತು. ಶುಕ್ರವಾರ ಮಧ್ಯರಾತ್ರಿಯಿಂದಲೇ ಟೋಲ್ ಸಿಬ್ಬಂದಿ ಪರಿಷ್ಕೃತ ದರ ಸಂಗ್ರಹ ಮಾಡಲು ಆರಂಭಿಸಿದರು.</p>.<p>ಶನಿವಾರ ಬೆಳಿಗ್ಗೆ 10 ಗಂಟೆವರೆಗೆ ಹೊಸ ದರವನ್ನೇ ವಸೂಲಿ ಮಾಡಲಾಗುತ್ತಿತ್ತು. ನಂತರದಲ್ಲಿ ಮಾಧ್ಯಮಗಳು ಸ್ಥಳಕ್ಕೆ ಬಂದ ಬಳಿಕ ಸಿಬ್ಬಂದಿ ಟೋಲ್ನಲ್ಲಿ ಹಾಕಿದ್ದ ಹೊಸ ದರಪಟ್ಟಿ ಕಿತ್ತು ಹಾಕಿ ಹಳೇ ದರವನ್ನೇ ಸಂಗ್ರಹ ಮಾಡಲು ಆರಂಭಿಸಿದರು.</p>.<p>ಜನಾಭಿಪ್ರಾಯಕ್ಕೆ ಮಣಿದು ದರ ಪರಿಷ್ಕರಣೆ ಆದೇಶ ಹಿಂಪಡೆದಿರುವುದಾಗಿ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಟೋಲ್ ಎರಡು ವಾರದ ಅಂತರದಲ್ಲೇ ಟೋಲ್ ದರ ಏರಿಸಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಪ್ರಧಾನಿ ಮೋದಿ ಮಾರ್ಚ್ 12ರಂದು ಹೆದ್ದಾರಿ ಉದ್ಘಾಟಿಸಿದ್ದರು. 14ರಿಂದ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ, ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹ ಆರಂಭಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇ ಟೋಲ್ ದರ ಹೆಚ್ಚಳವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶನಿವಾರ ಹಿಂಪಡೆದಿದೆ.</p>.<p>ಟೋಲ್ ದರವನ್ನು ಶನಿವಾರದಿಂದ (ಏ.1) ಅನ್ವಯವಾಗುವಂತೆ ಶೇ 22ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿತ್ತು.</p>.<p>ವಾಹನಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಕನಿಷ್ಠ ₹ 35ರಿಂದ ಗರಿಷ್ಠ ₹350ರವರೆಗೆ ಟೋಲ್ ಶುಲ್ಕ ಏರಿತ್ತು. ಶುಕ್ರವಾರ ಮಧ್ಯರಾತ್ರಿಯಿಂದಲೇ ಟೋಲ್ ಸಿಬ್ಬಂದಿ ಪರಿಷ್ಕೃತ ದರ ಸಂಗ್ರಹ ಮಾಡಲು ಆರಂಭಿಸಿದರು.</p>.<p>ಶನಿವಾರ ಬೆಳಿಗ್ಗೆ 10 ಗಂಟೆವರೆಗೆ ಹೊಸ ದರವನ್ನೇ ವಸೂಲಿ ಮಾಡಲಾಗುತ್ತಿತ್ತು. ನಂತರದಲ್ಲಿ ಮಾಧ್ಯಮಗಳು ಸ್ಥಳಕ್ಕೆ ಬಂದ ಬಳಿಕ ಸಿಬ್ಬಂದಿ ಟೋಲ್ನಲ್ಲಿ ಹಾಕಿದ್ದ ಹೊಸ ದರಪಟ್ಟಿ ಕಿತ್ತು ಹಾಕಿ ಹಳೇ ದರವನ್ನೇ ಸಂಗ್ರಹ ಮಾಡಲು ಆರಂಭಿಸಿದರು.</p>.<p>ಜನಾಭಿಪ್ರಾಯಕ್ಕೆ ಮಣಿದು ದರ ಪರಿಷ್ಕರಣೆ ಆದೇಶ ಹಿಂಪಡೆದಿರುವುದಾಗಿ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಟೋಲ್ ಎರಡು ವಾರದ ಅಂತರದಲ್ಲೇ ಟೋಲ್ ದರ ಏರಿಸಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಪ್ರಧಾನಿ ಮೋದಿ ಮಾರ್ಚ್ 12ರಂದು ಹೆದ್ದಾರಿ ಉದ್ಘಾಟಿಸಿದ್ದರು. 14ರಿಂದ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ, ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹ ಆರಂಭಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>