‘ಬಿಜೆಪಿ ರೌಡಿಗಳಿಗೆ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆ್ಯಕ್ಟಿವ್ ಆಗಿದೆ. ಆರಗ ಜ್ಞಾನೇಂದ್ರ ಅವರೇ, ಭೂಗತಲೋಕಕ್ಕೆ ಧೈರ್ಯ ಬಂದಿದ್ದು, ನಿಮ್ಮಿಂದಲೇ ಅಲ್ಲವೇ? ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.