ಬೆಂಗಳೂರು: ಉದ್ಯಾನನಗರಿಯಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಿಸುತ್ತಿರುವ ಕಾರಣ ಬೆಂಗಳೂರು ವಿಶ್ವವಿದ್ಯಾಲಯವು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕಚೇರಿಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಇದೇ 20 ಅಥವಾ ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ.
‘ಸಿಬ್ಬಂದಿಯ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದೂರವಾಣಿ ಮೂಲಕ ಸಂಬಂಧಪಟ್ಟ ಕಚೇರಿಯನ್ನು ಸಂಪರ್ಕಿಸಿ ತಮ್ಮ ಅಹವಾಲುಗಳ ಕುರಿತಾದ ಮಾಹಿತಿ ಪಡೆದುಕೊಳ್ಳಬೇಕು’ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.