ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಪಾಕ್ ಆಕ್ರಮಿತ ಕಾಶ್ಮೀರ ಕಾಂಗ್ರೆಸ್ನ ಕೊಡುಗೆಯಾಗಿದೆ. ಹಿಮಾಲಯದಲ್ಲಿ ಹುಲ್ಲುಕಡ್ಡಿಯೂ ಬೆಳೆಯುವುದಿಲ್ಲ ಎಂಬ ಕಾರಣಕ್ಕೆ ಭಾರತದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವುದಾಗಿ ನೆಹರೂ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ದೇಶದ ಬಹುಭಾಗಗಳನ್ನು ಬೇರೆ ದೇಶಗಳಿಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಪಾದಯಾತ್ರೆಯನ್ನು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಚೀನಾದ ಗಡಿಗಳಲ್ಲಿ ಮಾಡಲಿ ಎಂದು ವ್ಯಂಗ್ಯವಾಡಿದರು.