<p><strong>ಗುಂಡ್ಲುಪೇಟೆ</strong>: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ 'ಭಾರತ್ ಜೋಡೊ ಯಾತ್ರೆ' ಇಂದು (ಸೆ.30, ಶುಕ್ರವಾರ) ಕರ್ನಾಟಕ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾತ್ರೆಗೆ ಅಡ್ಡಿಪಡಿಸಲು ಯತ್ನಿಸಿದರೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಯಾತ್ರೆಯು ತಮಿಳುನಾಡು ಹಾಗೂ ಕೇರಳ ಸಂಚಾರ ಮುಗಿಸಿ ಕೇರಳದ ಸುಲ್ತಾನ್ ಬತ್ತೇರಿ ಮಾರ್ಗವಾಗಿ ರಾಜ್ಯ ಪ್ರವೇಶಿಸಿದೆ. ಗುಂಡ್ಲುಪೇಟೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ, ದೇಶವನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವುದು ಯಾತ್ರೆಯ ಉದ್ದೇಶ ಎಂದು ಹೇಳಿದ್ದಾರೆ.</p>.<p>'ದೇಶದಲ್ಲಿ ಅಶಾಂತಿ ನೆಲೆಗೊಂಡಿದೆ. ಸಾಕಷ್ಟು ಸಮಸ್ಯೆಗಳು ಉಲ್ಬಣಿಸಿವೆ. ಭ್ರಷ್ಟಾಚಾರ ಮಿತಿಮೀರಿದೆ. ಕರ್ನಾಟದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರವಿದೆ' ಎಂದು ಕಿಡಿಕಾರಿದ್ದಾರೆ.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ, ಜನರು ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಹಾಗೆಯೇ, 'ರಾಜ್ಯದಲ್ಲಿ ಈ ಸಮಾವೇಶ ನಡೆಯುತ್ತಿರುವುದನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ' ಎಂದು ತಿವಿದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/no-other-way-to-raise-voice-for-the-people-except-bharat-jodo-yatra-says-rahul-gandhi-976440.html" itemprop="url" target="_blank">ಜನರ ಪರ ಧ್ವನಿ ಎತ್ತಲು ಪಾದಯಾತ್ರೆ ಬಿಟ್ಟು ಬೇರೆ ದಾರಿಯೇ ಇಲ್ಲ: ರಾಹುಲ್ ಗಾಂಧಿ </a></p>.<p>'ನಮಗೆ ಅಡ್ಡಿಪಡಿಸದಂತೆ ನಿಮಗೆ (ಬಿಜೆಪಿಯವರಿಗೆ) ಎಚ್ಚರಿಕೆ ನೀಡುತ್ತಿದ್ದೇನೆ. ಇಲ್ಲವಾದರೆ, ನಿಮ್ಮನ್ನು ರಾಜ್ಯದಲ್ಲಿ ಓಡಾಡಲು ಬಿಡುವುದಿಲ್ಲ' ಎಂದು ಎಚ್ಚರಿಸಿದ್ದಾರೆ. ಇದೇವೇಳೆ ಅವರು ರಾಜ್ಯ ಪೊಲೀಸರು ಬಿಜೆಪಿ ಜೊತೆ ಕೈಜೋಡಿಸದಂತೆ ತಿಳಿಸಿದ್ದಾರೆ.</p>.<p>'ಆರು ತಿಂಗಳ ನಂತರ ನಾವು ಅಧಿಕಾರಕ್ಕೆ ಬರುತ್ತೇವೆ. ಬದಲಾವಣೆ ಆಗಲಿದೆ. ಎಲ್ಲ ಪೊಲೀಸರೂ ಒಂದೇರೀತಿ ಇರುವುದಿಲ್ಲ. ಆದರೆ, ಬಿಜೆಪಿ ಜೊತೆಗೆ ಕೈ ಜೋಡಿಸಿದವರೆಗೆ ತಕ್ಕ ಪಾಠ ಕಲಿಸುತ್ತೇವೆ' ಎಂದು ಕಟುವಾಗಿ ಹೇಳಿದ್ದಾರೆ.</p>.<p>ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ಬಳಿಕ ದೇಶದಲ್ಲಿ ಉದ್ದೇಶಪೂರ್ವಕವಾಗಿ ಕೋಮುವಾದ, ತಾರತಮ್ಯ ಮತ್ತು ದ್ವೇಷ ರಾಜಕೀಯ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>'ದಲಿತರು, ಹಿಂದುಳಿದ ವರ್ಗದವರು, ಮಹಿಳೆಯರು ಮತ್ತು ರೈತರ ನಡುವೆ ಆತಂಕದ ವಾತಾವರಣವಿದೆ' ಎಂದಿರುವ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ಬಿಜೆಪಿಗೆ ನಂಬಿಕೆಯೇ ಇಲ್ಲ ಎಂದು ಕುಟುಕಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/why-bharat-jodo-yatra-enter-karnataka-through-sulthan-bathery-here-is-bjp-answer-976434.html" itemprop="url" target="_blank">ಕೈ ಯಾತ್ರೆ ಸುಲ್ತಾನ್ ಬತ್ತೇರಿ ಮೂಲಕ ಬಂದಿದ್ದು ಏಕೆ? ಇಲ್ಲಿದೆ ಬಿಜೆಪಿ ವಿವರಣೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ 'ಭಾರತ್ ಜೋಡೊ ಯಾತ್ರೆ' ಇಂದು (ಸೆ.30, ಶುಕ್ರವಾರ) ಕರ್ನಾಟಕ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾತ್ರೆಗೆ ಅಡ್ಡಿಪಡಿಸಲು ಯತ್ನಿಸಿದರೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಯಾತ್ರೆಯು ತಮಿಳುನಾಡು ಹಾಗೂ ಕೇರಳ ಸಂಚಾರ ಮುಗಿಸಿ ಕೇರಳದ ಸುಲ್ತಾನ್ ಬತ್ತೇರಿ ಮಾರ್ಗವಾಗಿ ರಾಜ್ಯ ಪ್ರವೇಶಿಸಿದೆ. ಗುಂಡ್ಲುಪೇಟೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ, ದೇಶವನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವುದು ಯಾತ್ರೆಯ ಉದ್ದೇಶ ಎಂದು ಹೇಳಿದ್ದಾರೆ.</p>.<p>'ದೇಶದಲ್ಲಿ ಅಶಾಂತಿ ನೆಲೆಗೊಂಡಿದೆ. ಸಾಕಷ್ಟು ಸಮಸ್ಯೆಗಳು ಉಲ್ಬಣಿಸಿವೆ. ಭ್ರಷ್ಟಾಚಾರ ಮಿತಿಮೀರಿದೆ. ಕರ್ನಾಟದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರವಿದೆ' ಎಂದು ಕಿಡಿಕಾರಿದ್ದಾರೆ.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ, ಜನರು ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಹಾಗೆಯೇ, 'ರಾಜ್ಯದಲ್ಲಿ ಈ ಸಮಾವೇಶ ನಡೆಯುತ್ತಿರುವುದನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ' ಎಂದು ತಿವಿದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/no-other-way-to-raise-voice-for-the-people-except-bharat-jodo-yatra-says-rahul-gandhi-976440.html" itemprop="url" target="_blank">ಜನರ ಪರ ಧ್ವನಿ ಎತ್ತಲು ಪಾದಯಾತ್ರೆ ಬಿಟ್ಟು ಬೇರೆ ದಾರಿಯೇ ಇಲ್ಲ: ರಾಹುಲ್ ಗಾಂಧಿ </a></p>.<p>'ನಮಗೆ ಅಡ್ಡಿಪಡಿಸದಂತೆ ನಿಮಗೆ (ಬಿಜೆಪಿಯವರಿಗೆ) ಎಚ್ಚರಿಕೆ ನೀಡುತ್ತಿದ್ದೇನೆ. ಇಲ್ಲವಾದರೆ, ನಿಮ್ಮನ್ನು ರಾಜ್ಯದಲ್ಲಿ ಓಡಾಡಲು ಬಿಡುವುದಿಲ್ಲ' ಎಂದು ಎಚ್ಚರಿಸಿದ್ದಾರೆ. ಇದೇವೇಳೆ ಅವರು ರಾಜ್ಯ ಪೊಲೀಸರು ಬಿಜೆಪಿ ಜೊತೆ ಕೈಜೋಡಿಸದಂತೆ ತಿಳಿಸಿದ್ದಾರೆ.</p>.<p>'ಆರು ತಿಂಗಳ ನಂತರ ನಾವು ಅಧಿಕಾರಕ್ಕೆ ಬರುತ್ತೇವೆ. ಬದಲಾವಣೆ ಆಗಲಿದೆ. ಎಲ್ಲ ಪೊಲೀಸರೂ ಒಂದೇರೀತಿ ಇರುವುದಿಲ್ಲ. ಆದರೆ, ಬಿಜೆಪಿ ಜೊತೆಗೆ ಕೈ ಜೋಡಿಸಿದವರೆಗೆ ತಕ್ಕ ಪಾಠ ಕಲಿಸುತ್ತೇವೆ' ಎಂದು ಕಟುವಾಗಿ ಹೇಳಿದ್ದಾರೆ.</p>.<p>ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ಬಳಿಕ ದೇಶದಲ್ಲಿ ಉದ್ದೇಶಪೂರ್ವಕವಾಗಿ ಕೋಮುವಾದ, ತಾರತಮ್ಯ ಮತ್ತು ದ್ವೇಷ ರಾಜಕೀಯ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>'ದಲಿತರು, ಹಿಂದುಳಿದ ವರ್ಗದವರು, ಮಹಿಳೆಯರು ಮತ್ತು ರೈತರ ನಡುವೆ ಆತಂಕದ ವಾತಾವರಣವಿದೆ' ಎಂದಿರುವ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ಬಿಜೆಪಿಗೆ ನಂಬಿಕೆಯೇ ಇಲ್ಲ ಎಂದು ಕುಟುಕಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/why-bharat-jodo-yatra-enter-karnataka-through-sulthan-bathery-here-is-bjp-answer-976434.html" itemprop="url" target="_blank">ಕೈ ಯಾತ್ರೆ ಸುಲ್ತಾನ್ ಬತ್ತೇರಿ ಮೂಲಕ ಬಂದಿದ್ದು ಏಕೆ? ಇಲ್ಲಿದೆ ಬಿಜೆಪಿ ವಿವರಣೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>