ಭಾರತ್ ಜೋಡೊ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿರುವ ಅವರು, ‘ದೇಶದಲ್ಲಿ 55 ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್ಗೆ ಅಸಮಾನತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಪ್ರಧಾನಿ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಎಲ್ಲರೂ ಬಡತನ ನಿರ್ಮೂಲನೆ ಕುರಿತು ಭಾಷಣ ಮಾಡಿದ್ದರು. ಆದರೆ ಸಾಧಿಸಿದ್ದು ಏನೂ ಇಲ್ಲ’ ಕಿಡಿಕಾರಿದ್ದಾರೆ.