ದೆಹಲಿಯಿಂದಷ್ಟೇ ಅವರು ಆಡಳಿತ ನಡೆಸುತ್ತಿದ್ದರು. ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಭಾರತ ಜೋಡೊ ಯಾತ್ರೆಗೆ ಯಾರ ಅಭ್ಯಂತರವೂ ಇಲ್ಲ. ಭಾರತ ತೋಡೊ ಆಗಬಾರದು. ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ ಮಾತೆಗೆ ಗೌರವ ಕೊಡುವವರನ್ನು ಭೇಟಿ ಆಗಲಿ ಎಂದರು.
ಹೃದಯದಿಂದ ಬಂದು ಯಾತ್ರೆಯಲ್ಲಿ ತೊಡಗಿಸಿಕೊಳ್ಳಲಿ. ಆರ್ಎಸ್ಎಸ್ ಅನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಆರ್ಎಸ್ಎಸ್ ದೇಶದ ಹಿತದ ಬಗ್ಗೆ ನಂಬಿಕೆ ಇಟ್ಟಿರುವ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿದರು.