‘ಕಾಲೇಜಿನ ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾರತದ ಭೂಪಟವನ್ನೇ ಬದಲಾಯಿಸಿ, ಮಹಿಳೆ ಭಗವಾಧ್ವಜ ಹಿಡಿದ ಚಿತ್ರ ಬಳಸಲು ಸಿದ್ಧತೆ ನಡೆದಿತ್ತು. ಧಾರ್ಮಿಕ ಆಚರಣೆಗಳಿಗೆ ಕಾಲೇಜಿನಲ್ಲಿ ಅವಕಾಶವಿಲ್ಲ ಎಂಬ ಕಾರಣಕ್ಕೆ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಿದ್ದ ಕಾಲೇಜಿನ ಆಡಳಿತ ಮಂಡಳಿಗೆ ಈ ಕಾರ್ಯಕ್ರಮವು ಧಾರ್ಮಿಕ ಆಚರಣೆಯಂತೆ ಕಂಡಿಲ್ಲವೇ’ ಎಂದು ಸಿಎಫ್ಐನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ತಾಜುದ್ದೀನ್ ಪ್ರಶ್ನಿಸಿದರು.