ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಬಿಜೆಯವರು ಲಜ್ಜೆಗೆಟ್ಟವರು. ರಾಜ್ಯ ಸರ್ಕಾರದಲ್ಲಷ್ಟೆ ಅಲ್ಲ, ಕೇಂದ್ರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ನಾನು ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ ಎನ್ನುವ ಮೋದಿ ರಾಜ್ಯ ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘದವರು ಕೊಟ್ಟಿರುವ ಶೇ 40ರಷ್ಟು ಕಮಿಷನ್ ದೂರನ್ನು ಪರಿಗಣಿಸಲೇ ಇಲ್ಲ. ಚೌಕಿದಾರ ಎಂದು ಹೇಳಿಕೊಂಡಿರಲ್ಲಾ, ಅದೆಲ್ಲಿ ಕಾವಲುಗಾರನ ಕೆಲಸ ಮಾಡುತ್ತಿದ್ದೀರಿ ಮೋದಿ ಅವರೇ?’ ಎಂದು ವ್ಯಂಗ್ಯವಾಗಿ ಕೇಳಿದರು.