<p><strong>ಬೆಂಗಳೂರು</strong>: ಸದ್ಗುರು ತ್ಯಾಗಬ್ರಹ್ಮ ವೈದಿಕ ಆರಾಧನಾ ಕೈಂಕರ್ಯ ಟ್ರಸ್ಟ್ ನೀಡುವ ‘ಭಾರತಿ ತ್ಯಾಗರಾಜ ಸಮ್ಮಾನ್’ ಪ್ರಶಸ್ತಿಗೆ ಕರ್ನಾಟಕ ಸಂಗೀತದ ಸಾಧಕ ಆರ್.ಕೆ. ಪದ್ಮನಾಭ, ಮೃದಂಗ ವಿದ್ವಾನ್ ವಿ.ಎಸ್. ರಾಜಗೋಪಾಲ್ ಹಾಗೂ ಗಾಯಕಿ ಆರ್.ಎ. ರಮಾಮಣಿ ಅವರು ಆಯ್ಕೆಯಾಗಿದ್ದಾರೆ.</p>.<p>ಜ.6ರಿಂದ 12ರ ವರೆಗೆ ‘176ನೇ ವರ್ಷದ ತ್ಯಾಗರಾಜರ ಆರಾಧನೆ ಮತ್ತು ರಾಷ್ಟ್ರೀಯ ಸಂಗೀತೋತ್ಸವ’ ಕಾರ್ಯಕ್ರಮವನ್ನು ಚಾಮರಾಜಪೇಟೆಯ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಲಾಗಿದೆ. ಇದೇ 12ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ. ಪ್ರಶಸ್ತಿಯು ತಲಾ ₹1 ಲಕ್ಷ ನಗದು ಮತ್ತು ಚಿನ್ನದ ಪದಕ ಒಳಗೊಂಡಿದೆ.</p>.<p>ಪ್ರತಿದಿನ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ತ್ಯಾಗರಾಜರ ಆರಾಧನೆ ಮತ್ತು ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮಾತ್ರವಲ್ಲದೇ, ಬೇರೆ ರಾಜ್ಯಗಳ 300ಕ್ಕೂ ಹೆಚ್ಚು ಶಾಸ್ತ್ರೀಯ ಸಂಗೀತಗಾರರು ಪಾಲ್ಗೊಳ್ಳಲಿದ್ದಾರೆ. ಉಮಯಲಪುರಂ ಶಿವರಾಮನ್, ಜಯಂತಿ ಕುಮರೇಶ್ ಮತ್ತು ಕುಮಾರೇಶ್, ವಿಜಯ್ ಪ್ರಕಾಶ್, ಅಮಿತ್ ನಾಡಿಗ್, ನಾಗವಲ್ಲಿ ನಾಗರಾಜ್, ರಘುನಂದನ್, ಸುಚೇನ್ ಮುಂತಾದ ಸಂಗೀತಗಾರರು ಕಛೇರಿ ನಡೆಸಿಕೊಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸದ್ಗುರು ತ್ಯಾಗಬ್ರಹ್ಮ ವೈದಿಕ ಆರಾಧನಾ ಕೈಂಕರ್ಯ ಟ್ರಸ್ಟ್ ನೀಡುವ ‘ಭಾರತಿ ತ್ಯಾಗರಾಜ ಸಮ್ಮಾನ್’ ಪ್ರಶಸ್ತಿಗೆ ಕರ್ನಾಟಕ ಸಂಗೀತದ ಸಾಧಕ ಆರ್.ಕೆ. ಪದ್ಮನಾಭ, ಮೃದಂಗ ವಿದ್ವಾನ್ ವಿ.ಎಸ್. ರಾಜಗೋಪಾಲ್ ಹಾಗೂ ಗಾಯಕಿ ಆರ್.ಎ. ರಮಾಮಣಿ ಅವರು ಆಯ್ಕೆಯಾಗಿದ್ದಾರೆ.</p>.<p>ಜ.6ರಿಂದ 12ರ ವರೆಗೆ ‘176ನೇ ವರ್ಷದ ತ್ಯಾಗರಾಜರ ಆರಾಧನೆ ಮತ್ತು ರಾಷ್ಟ್ರೀಯ ಸಂಗೀತೋತ್ಸವ’ ಕಾರ್ಯಕ್ರಮವನ್ನು ಚಾಮರಾಜಪೇಟೆಯ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಲಾಗಿದೆ. ಇದೇ 12ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ. ಪ್ರಶಸ್ತಿಯು ತಲಾ ₹1 ಲಕ್ಷ ನಗದು ಮತ್ತು ಚಿನ್ನದ ಪದಕ ಒಳಗೊಂಡಿದೆ.</p>.<p>ಪ್ರತಿದಿನ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ತ್ಯಾಗರಾಜರ ಆರಾಧನೆ ಮತ್ತು ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮಾತ್ರವಲ್ಲದೇ, ಬೇರೆ ರಾಜ್ಯಗಳ 300ಕ್ಕೂ ಹೆಚ್ಚು ಶಾಸ್ತ್ರೀಯ ಸಂಗೀತಗಾರರು ಪಾಲ್ಗೊಳ್ಳಲಿದ್ದಾರೆ. ಉಮಯಲಪುರಂ ಶಿವರಾಮನ್, ಜಯಂತಿ ಕುಮರೇಶ್ ಮತ್ತು ಕುಮಾರೇಶ್, ವಿಜಯ್ ಪ್ರಕಾಶ್, ಅಮಿತ್ ನಾಡಿಗ್, ನಾಗವಲ್ಲಿ ನಾಗರಾಜ್, ರಘುನಂದನ್, ಸುಚೇನ್ ಮುಂತಾದ ಸಂಗೀತಗಾರರು ಕಛೇರಿ ನಡೆಸಿಕೊಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>