ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸಮೀಕ್ಷೆಯಿಂದ ದೊರೆತ ಅಂಕಿ ಅಂಶಗಳ ಪ್ರಕಾರ, ಆಗಸ್ಟ್ ಹಾಗೂ ಸೆಪ್ಟೆಂಬರ್ನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಒಟ್ಟು ₹ 9,952 ಕೋಟಿ ನಷ್ಟ ಉಂಟಾಗಿದೆ. 10.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಅಂದಾಜಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಪ್ರಾಕೃತಿಕ ವಿಕೋಪ ತಡೆ ಯೋಜನೆ ಜಾರಿಯಲ್ಲಿರುವುದರಿಂದ, ಪರಿಹಾರ ವಿತರಣೆ ಸುಲಭವಾಗಿದ್ದು ತೊಂದರೆಗೀಡಾದವರಿಗೆ ಒಂದು ವಾರದೊಳಗಾಗಿ ಪರಿಹಾರ ನೀಡಲಾಗಿದೆ’ ಎಂದರು.