<p><strong>ಕಲಬುರ್ಗಿ</strong>: ಭೀಮಾ ನದಿಯ ಹರಿವಿನ ಮಟ್ಟ ಮಂಗಳವಾರ ಗಣನೀಯವಾಗಿ ತಗ್ಗಿದ್ದು, ಕಲಬುರ್ಗಿ ಜಿಲ್ಲೆಯಲ್ಲಿ ಹಲವು ಗ್ರಾಮಗಳನ್ನು ಆವರಿಸಿಕೊಂಡಿದ್ದ ಪ್ರವಾಹ ಇಳಿಮುಖವಾಗುತ್ತಿದೆ.</p>.<p>ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಮುಂದುವರಿದಿದ್ದು,ಶಹಾಪುರ ತಾಲ್ಲೂಕಿನ ಹುರಸಗುಂಡಗಿ, ರೋಜಾ, ಹೊಸೂರ, ಅಣಬಿ ಗ್ರಾಮಗಳಿಗೆ ನೀರು ನುಗ್ಗಿ, ಸಾವಿರಾರು ಎಕರೆ ಜಮೀನು ಜಲಾವೃತ್ತವಾಗಿದೆ.</p>.<p>ಅಣಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತೆಗೆದಿರುವ ಕಾಳಜಿ ಕೇಂದ್ರದಲ್ಲಿ ಶೌಚಾಲಯ ಇಲ್ಲ. ಬಯಲೇ ಗತಿಯಾಗಿದೆ ಎಂದು ಅಲ್ಲಿದ್ದ ಸಂತ್ರಸ್ತರು ದೂರಿದರು.ಶಹಾಪುರ ತಾಲ್ಲೂಕಿನ ರೋಜಾ ಗ್ರಾಮದವರನ್ನು ಸ್ಥಳಾಂತರಿಸಿರುವ ಹೊಸೂರ ಗ್ರಾಮದ ಕಾಳಜಿ ಕೇಂದ್ರದಲ್ಲಿ ಸ್ನಾನಕ್ಕೂ ಸೌಲಭ್ಯ ಇಲ್ಲ ಎಂದು ಮಹಿಳೆಯರು ಅಲವತ್ತುಕೊಂಡರು.</p>.<p>ಸೊನ್ನ ಬ್ಯಾರೇಜ್ ಹತ್ತಿರಮಂಗಳವಾರ ಮಧ್ಯಾಹ್ನದಿಂದ 1.78 ಲಕ್ಷ ಕ್ಯುಸೆಕ್ ನೀರು ಹರಿಯುತ್ತಿದೆ. ಚಿತ್ತಾಪುರ ತಾಲ್ಲೂಕಿನ ಕಡಬೂರ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.</p>.<p>ರಾಯಚೂರು ಜಿಲ್ಲೆಯಲ್ಲಿಯೂ ಪ್ರವಾಹ ಭೀತಿ ದೂರವಾಗಿದೆ. ಕಲಬುರ್ಗಿ ನಗರ ಹಾಗೂ ಜಿಲ್ಲೆಯ ಹಲವೆಡೆ, ಕೊಪ್ಪಳ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.</p>.<p class="Subhead"><strong>ಮತ್ತೆ ಮಳೆ (ಹುಬ್ಬಳ್ಳಿ ವರದಿ): </strong>ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಮೇತ ಮಂಗಳವಾರ ಮಳೆಯಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಕೃಷ್ಣಾ, ಘಟಪ್ರಭಾ, ಭೀಮಾ ನದಿಗಳ ಪ್ರವಾಹ ಸ್ಥಿತಿ ಇಳಿಮುಖವಾಗಿದ್ದು, ನದಿಪಾತ್ರದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಹಾಗೂ ಪರಿಹಾರ ಕಾರ್ಯಗಳು ಮುಂದುವರಿದಿವೆ.</p>.<p>ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು–ಸಿಡಿಲು ಸಹಿತ ಜೋರು ಮಳೆ ಸುರಿದಿದೆ. ಗದಗ, ಹಾವೇರಿ, ಧಾರವಾಡ,ಚಿತ್ರದುರ್ಗ, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಯಲ್ಲೂ ಮಳೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಭೀಮಾ ನದಿಯ ಹರಿವಿನ ಮಟ್ಟ ಮಂಗಳವಾರ ಗಣನೀಯವಾಗಿ ತಗ್ಗಿದ್ದು, ಕಲಬುರ್ಗಿ ಜಿಲ್ಲೆಯಲ್ಲಿ ಹಲವು ಗ್ರಾಮಗಳನ್ನು ಆವರಿಸಿಕೊಂಡಿದ್ದ ಪ್ರವಾಹ ಇಳಿಮುಖವಾಗುತ್ತಿದೆ.</p>.<p>ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಮುಂದುವರಿದಿದ್ದು,ಶಹಾಪುರ ತಾಲ್ಲೂಕಿನ ಹುರಸಗುಂಡಗಿ, ರೋಜಾ, ಹೊಸೂರ, ಅಣಬಿ ಗ್ರಾಮಗಳಿಗೆ ನೀರು ನುಗ್ಗಿ, ಸಾವಿರಾರು ಎಕರೆ ಜಮೀನು ಜಲಾವೃತ್ತವಾಗಿದೆ.</p>.<p>ಅಣಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತೆಗೆದಿರುವ ಕಾಳಜಿ ಕೇಂದ್ರದಲ್ಲಿ ಶೌಚಾಲಯ ಇಲ್ಲ. ಬಯಲೇ ಗತಿಯಾಗಿದೆ ಎಂದು ಅಲ್ಲಿದ್ದ ಸಂತ್ರಸ್ತರು ದೂರಿದರು.ಶಹಾಪುರ ತಾಲ್ಲೂಕಿನ ರೋಜಾ ಗ್ರಾಮದವರನ್ನು ಸ್ಥಳಾಂತರಿಸಿರುವ ಹೊಸೂರ ಗ್ರಾಮದ ಕಾಳಜಿ ಕೇಂದ್ರದಲ್ಲಿ ಸ್ನಾನಕ್ಕೂ ಸೌಲಭ್ಯ ಇಲ್ಲ ಎಂದು ಮಹಿಳೆಯರು ಅಲವತ್ತುಕೊಂಡರು.</p>.<p>ಸೊನ್ನ ಬ್ಯಾರೇಜ್ ಹತ್ತಿರಮಂಗಳವಾರ ಮಧ್ಯಾಹ್ನದಿಂದ 1.78 ಲಕ್ಷ ಕ್ಯುಸೆಕ್ ನೀರು ಹರಿಯುತ್ತಿದೆ. ಚಿತ್ತಾಪುರ ತಾಲ್ಲೂಕಿನ ಕಡಬೂರ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.</p>.<p>ರಾಯಚೂರು ಜಿಲ್ಲೆಯಲ್ಲಿಯೂ ಪ್ರವಾಹ ಭೀತಿ ದೂರವಾಗಿದೆ. ಕಲಬುರ್ಗಿ ನಗರ ಹಾಗೂ ಜಿಲ್ಲೆಯ ಹಲವೆಡೆ, ಕೊಪ್ಪಳ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.</p>.<p class="Subhead"><strong>ಮತ್ತೆ ಮಳೆ (ಹುಬ್ಬಳ್ಳಿ ವರದಿ): </strong>ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಮೇತ ಮಂಗಳವಾರ ಮಳೆಯಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಕೃಷ್ಣಾ, ಘಟಪ್ರಭಾ, ಭೀಮಾ ನದಿಗಳ ಪ್ರವಾಹ ಸ್ಥಿತಿ ಇಳಿಮುಖವಾಗಿದ್ದು, ನದಿಪಾತ್ರದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಹಾಗೂ ಪರಿಹಾರ ಕಾರ್ಯಗಳು ಮುಂದುವರಿದಿವೆ.</p>.<p>ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು–ಸಿಡಿಲು ಸಹಿತ ಜೋರು ಮಳೆ ಸುರಿದಿದೆ. ಗದಗ, ಹಾವೇರಿ, ಧಾರವಾಡ,ಚಿತ್ರದುರ್ಗ, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಯಲ್ಲೂ ಮಳೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>