‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಸ್ಸಿಎಸ್ಪಿ–ಟಿಎಸ್ಪಿ ಯೋಜನೆಗೆ ₹89 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. 2018–19ರಲ್ಲಿ ₹29,600 ಕೋಟಿ ಒದಗಿಸಲಾಗಿತ್ತು. ರಾಜ್ಯದ ಬಜೆಟ್ ಗಾತ್ರ ₹72 ಸಾವಿರ ಕೋಟಿ ಜಾಸ್ತಿ ಆಗಿದೆ. ಆದರೆ, ಎಸ್ಸಿಎಸ್ಪಿ–ಟಿಎಸ್ಪಿ ಯೋಜನೆಗೆ ನೀಡುತ್ತಿರುವ ಅನುದಾನ ಕಡಿಮೆ ಆಗುತ್ತಿದೆ. ಈ ವರ್ಷ ₹28 ಸಾವಿರ ಕೋಟಿಯಷ್ಟೇ ಒದಗಿಸಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸೋಪ್ ಕಿಟ್ಗಳನ್ನು ಸಹ ನಿಲ್ಲಿಸಲಾಗಿದೆ. ಇದು ಅನ್ಯಾಯ ಅಲ್ಲವೇ’ ಎಂದು ಪ್ರಶ್ನಿಸಿದರು.