‘ಶುಕ್ರವಾರ ರಾತ್ರಿಯಿಂದ ಜಯದೇವ ಹೃದ್ರೋಗ ಸಂಸ್ಥೆಯ ವೈದ್ಯರು ಆರೋಪಿಯ ಆರೋಗ್ಯ ತಪಾಸಣೆ ನಡೆಸಿದ್ದರು. ಶನಿವಾರ ಬೆಳಿಗ್ಗೆಯಿಂದ ಪುನಃ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಪಿಯ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ವರದಿ ನೀಡಿದ ವೈದ್ಯರು, ನಾಗರಾಜಪ್ಪ ಅವರನ್ನು ಒಳರೋಗಿ ವಿಭಾಗದಿಂದ ಬಿಡುಗಡೆ ಮಾಡಿದರು. ಬಳಿಕ ವೈದ್ಯಕೀಯ ವರದಿಯೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.