‘ಮುಖ್ಯವಾಗಿ ಭುವನೇಶ್ವರಿ ನಿಂತ ಭಂಗಿಯೇ ಕರ್ನಾಟಕ ನಕ್ಷೆಯಾಗಿದೆ. ಎಡಗೈಯಲ್ಲಿ ಪುಸ್ತಕವಿದೆ ಹೀಗಾಗಿ ಸರಸ್ವತಿ ಎನ್ನಬಹುದು, ಇನ್ನೊಂದು ಕೈಯಲ್ಲಿ ತ್ರಿಶೂಲ ಹಿಡಿದಿರುವುದರಿಂದ ಪರಮೇಶ್ವರಿ ಎನ್ನಬಹುದು. ಮತ್ತೊಂದು ಕೈಯಲ್ಲಿ ಕಮಲ ಹಿಡಿದಿರುವುದರಿಂದ ಲಕ್ಷ್ಮಿ ಎನ್ನಬಹುದು. ಬಿಳಿ ಸೀರೆ, ಹಸಿರು ಕುಪ್ಪಸ ತೊಡಿಸಲಾಗಿದೆ. ಸುತ್ತಲೂ ಹೊಯ್ಸಳರ ಲಾಂಛನ, ಬನಶಂಕರಿ ದೇವಸ್ಥಾನ, ಮೈಸೂರಿನ ಚಾಮುಂಡೇಶ್ವರಿ, ಶೃಂಗೇರಿ ಶಾರದಾಂಬೆ, ಚಾಲುಕ್ಯರ ಶಿಲ್ಪಕಲೆ, ಹಂಪಿ ಕಡಲೆಕಾಳು ಗಣಪ, ಶ್ರವಣಬೆಳಗೊಳ, ಜೋಗ, ಗೋಳಗುಮ್ಮಟ, ಕರಾವಳಿ ಹಾಗೂ ಹಸಿರು ಸಿರಿಯನ್ನು ಚಿತ್ರಿಸಲಾಗಿದೆ. ಜತೆಗೆ ರತ್ನಖಚಿತ ಮೆಟ್ಟಿಲುಗಳ ಮೇಲೆ ಭುವನೇಶ್ವರಿ ಕುಳಿತಿದ್ದಾಳೆ. ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವವಿದೆ. ಹೀಗಾಗಿ ಈ ಚಿತ್ರ ವಾಸ್ತವಿಕತೆಗೆ ಹತ್ತಿರವಾಗಿದೆ’ ಎಂಬುದು ಅವರ ಅಭಿಪ್ರಾಯವಾಗಿದೆ.