<p><strong>ಚಿಕ್ಕಮಗಳೂರು: </strong>‘ನೀವು (ಬಿಜೆಪಿಯವರು) ಮತದಾನದ ಹಕ್ಕನ್ನೇ ಮಾರಾಟ ಮಾಡಲು ಹೊರಟವರು. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಅದನ್ನು ಮೊದಲು ತೆಗೆದು ಹಾಕಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.</p>.<p>ಮೂಡಿಗೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದನ್ನು ಮೊದಲು ನಿಭಾಯಿಸಿಕೊಳ್ಳಿ’ ಎಂದು ಕುಟುಕಿದರು.</p>.<p>‘ಮತದಾರರ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದೇವೆ. ಚುನಾವಣಾ ಆಯೋಗ, ಪೊಲೀಸರು ತನಿಖೆಯಲ್ಲಿ ತೊಡಗಿದ್ದಾರೆ. ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಅಮಾನತಾಗಿದ್ದಾರೆ. ಇನ್ನು ಕೆಲವು ವಿಚಾರಗಳು ಇವೆ, ಬೆಂಗಳೂರಿನಲ್ಲಿ ಅವುಗಳನ್ನು ತಿಳಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ನನ್ನ ಮೇಲೆ ರೌಡಿಶೀಟ್ ಇಲ್ಲ. ಜೈಲಿಗೆ ಹೋಗಿಬಂದವರಲ್ಲಿ ಬಿ.ಎಸ್.ಯಡಿಯೂರಪ್ಪ, ಅಮಿತ್ ಶಾ, ಸಚಿವರ ಪೈಕಿ ಹಲವರು ಹಾಗೂ ನಾನೂ ಇದ್ದೇನೆ. ನನ್ನ ವಿರುದ್ಧ ಭಷ್ಟಾಚಾರ ಪ್ರಕರಣ, ವಿಚಾರಣೆ ಇರಲಿಲ್ಲ, ರಾಜಕೀಯ ಪ್ರೇರಿತವಾಗಿ ಜೈಲಿಗೆ ಹಾಕಿದ್ದರು’ ಎಂದು ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ನೀವು (ಬಿಜೆಪಿಯವರು) ಮತದಾನದ ಹಕ್ಕನ್ನೇ ಮಾರಾಟ ಮಾಡಲು ಹೊರಟವರು. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಅದನ್ನು ಮೊದಲು ತೆಗೆದು ಹಾಕಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.</p>.<p>ಮೂಡಿಗೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದನ್ನು ಮೊದಲು ನಿಭಾಯಿಸಿಕೊಳ್ಳಿ’ ಎಂದು ಕುಟುಕಿದರು.</p>.<p>‘ಮತದಾರರ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದೇವೆ. ಚುನಾವಣಾ ಆಯೋಗ, ಪೊಲೀಸರು ತನಿಖೆಯಲ್ಲಿ ತೊಡಗಿದ್ದಾರೆ. ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಅಮಾನತಾಗಿದ್ದಾರೆ. ಇನ್ನು ಕೆಲವು ವಿಚಾರಗಳು ಇವೆ, ಬೆಂಗಳೂರಿನಲ್ಲಿ ಅವುಗಳನ್ನು ತಿಳಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ನನ್ನ ಮೇಲೆ ರೌಡಿಶೀಟ್ ಇಲ್ಲ. ಜೈಲಿಗೆ ಹೋಗಿಬಂದವರಲ್ಲಿ ಬಿ.ಎಸ್.ಯಡಿಯೂರಪ್ಪ, ಅಮಿತ್ ಶಾ, ಸಚಿವರ ಪೈಕಿ ಹಲವರು ಹಾಗೂ ನಾನೂ ಇದ್ದೇನೆ. ನನ್ನ ವಿರುದ್ಧ ಭಷ್ಟಾಚಾರ ಪ್ರಕರಣ, ವಿಚಾರಣೆ ಇರಲಿಲ್ಲ, ರಾಜಕೀಯ ಪ್ರೇರಿತವಾಗಿ ಜೈಲಿಗೆ ಹಾಕಿದ್ದರು’ ಎಂದು ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>