ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, '2011ರ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್ ಸಿ ಅಧಿಸೂಚನೆಯಲ್ಲಿ ಪ್ರಕಟಿಸಿತ್ತು. ಅದನ್ನು 2015ರಲ್ಲಿ ಸರ್ಕಾರ ಒಪ್ಪಿಕೊಂಡಿತ್ತು. ಈ ಎಲ್ಲ ಅಂಶಗಳ ಆಧಾರದಲ್ಲಿ ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೂ ನೇಮಕಾತಿ ಆದೇಶ ನೀಡಲು ತೀರ್ಮಾನಿಸಲಾಗಿದೆ' ಎಂದರು.