‘ಈ ಗ್ಯಾಲರಿಯನ್ನು ದೇಸಿಯವಾಗಿ ಅಭಿವೃದ್ಧಿಪಡಿಸಲಾಗಿದೆ. ಇದು ‘ಆತ್ಮ ನಿರ್ಭರ ಭಾರತ’ ಯೋಜನೆಗೆ ಉತ್ತಮ ನಿದರ್ಶನ.ಕೃಷಿ, ಕೈಗಾರಿಕೆ, ಹೈನುಗಾರಿಕೆ ಹಾಗೂ ಪರಿಸರ ಜೈವಿಕ ತಂತ್ರಜ್ಞಾನಗಳ ಕುರಿತು ಈ ಗ್ಯಾಲರಿಯಲ್ಲಿ ವಿಶೇಷ ಮಾಹಿತಿ ಒದಗಿಸಲಾಗಿದೆ. ಮಕ್ಕಳು, ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು’ ಎಂದು ಐಐಟಿ (ಗುವಾಹಟಿ) ನಿರ್ದೇಶಕ ಹಾಗೂ ವಿಐಟಿಎಂ ಕಾರ್ಯಕಾರಿ ಸಮಿತಿ ಮುಖ್ಯಸ್ಥ ಟಿ.ಜಿ.ಸೀತಾರಾಂ ಹೇಳಿದರು.