‘ಮಾದಕ ವಸ್ತು ಸೇವಿಸಿ ಹೋಟೆಲೊಂದರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಶ್ರೀಕೃಷ್ಣ ಹಾಗೂ ಉದ್ಯಮಿಯೊಬ್ಬರ ಮಗ ವಿಷ್ಣು ಭಟ್ನನ್ನು ನವೆಂಬರ್ 5ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಶ್ರೀಕೃಷ್ಣ, ಜಾಮೀನು ಪಡೆದು ಹೊರಬಂದ ನಂತರ ತಲೆಮರೆಸಿಕೊಂಡಿದ್ದಾನೆ. ಜಾಮೀನು ಷರತ್ತಿನಂತೆ ತನಿಖಾಧಿಕಾರಿ ವಿಚಾರಣೆಗೂ ಆತ ಬಂದಿಲ್ಲ.ಹೀಗಾಗಿ, ಶ್ರೀಕೃಷ್ಣನ ಜಾಮೀನು ರದ್ದುಪಡಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದೇವೆ’ ’ ಎಂದು ಮೂಲಗಳು ಹೇಳಿವೆ.