‘ಈ ಪ್ರಕರಣವನ್ನು ಇ.ಡಿ ತನಿಖೆಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹಾಗೆ ಹೇಳಿದ ಮಾತ್ರಕ್ಕೆ ನಂಬಲು ಸಾಧ್ಯವಿಲ್ಲ. ತನಿಖೆಯನ್ನು ಹಿಂದೆ ಯಾವ ಸಂಸ್ಥೆ ಮಾಡಿತ್ತು, ಯಾರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು, ಎಷ್ಟು ಜನರನ್ನು ಬಂಧಿಸಲಾಗಿದೆ, ತನಿಖೆ ಮಾಡಿದ ಅಧಿಕಾರಿಗಳು ಯಾರು? ತನಿಖೆಯಲ್ಲಿ ಸಿಕ್ಕ ಮಾಹಿತಿಗಳೇನು? ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ದಾಖಲೆಗಳನ್ನು ಬಿಡುಗಡೆ ಮಾಡಲಿ’ ಎಂದು ಒತ್ತಾಯಿಸಿದರು.