‘ಮಾದಕ ವಸ್ತು ಸೇವಿಸಿ ಹೋಟೆಲೊಂದರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಶ್ರೀಕೃಷ್ಣ ಹಾಗೂ ಉದ್ಯಮಿಯೊಬ್ಬರ ಮಗ ವಿಷ್ಣು ಭಟ್ನನ್ನು ನವೆಂಬರ್ 5ರಂದು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ಮುಂದುವರಿದಿದೆ. ಡಿ. 11ರಂದು ಶ್ರೀಕೃಷ್ಣ ಠಾಣೆಗೆ ಬರಬೇಕಿತ್ತು. ಆದರೆ, ಆತ ಹಾಜರಾಗಿರಲಿಲ್ಲ. ಆತ ರಾಜ್ಯವನ್ನೇ ತೊರೆದು ಪರಾರಿಯಾಗಿರುವ ಮಾಹಿತಿ ಲಭ್ಯವಾಗಿತ್ತು. ಆತನಿಗಾಗಿ ಹುಡುಕಾಟ ಆರಂಭಿಸಲಾಗಿತ್ತು. ಆತನೇ ಭಾನುವಾರ ಠಾಣೆಗೆ ಬಂದು ಸಹಿ ಮಾಡಿ ಹೋಗಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.