<p><strong>ಬೆಂಗಳೂರು:</strong> ರಾಜ್ಯ ಕಾಂಗ್ರೆಸ್ ದುರ್ಬಲರ ವಿರುದ್ಧವಷ್ಟೇ ಕ್ರಮ ಕೈಗೊಳ್ಳುತ್ತದೆ ಎಂದು ಬಿಜೆಪಿ ಟೀಕಿಸಿದೆ.</p>.<p>‘ಶಿಸ್ತು ಸಮಿತಿ ನೋಟಿಸ್ ನೀಡಿದ್ದರೂ ಉತ್ತರಿಸದೇ ಇರುವ ಉಗ್ರಪ್ಪ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಫಲರಾಗಿದ್ದಾರೆ. ಡಿಕೆಶಿ ಅವರಿಗೆ ಉಗ್ರಪ್ಪ ಕಂಡರೆ ಭಯವೋ ಅಥವಾ ಉಗ್ರಪ್ಪ ಅವರು ಸಿದ್ದರಾಮಯ್ಯ ಅವರ ಬಣವೆಂಬ ಭೀತಿಯೋ’ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.</p>.<p><strong>ಓದಿ:</strong><a href="https://www.prajavani.net/karnataka-news/bjp-congress-tweet-war-on-covid-vaccination-india-achievement-of-1-billion-jabs-feat-877598.html" itemprop="url">ಲಸಿಕೆ ವಿತರಣೆಯ ಪ್ರಗತಿಗೆ ವಿಶ್ವವೇ ಬೆರಗಾಗಿದ್ದರೂ ಕಾಂಗ್ರೆಸ್ ಕೊಂಕು: ಬಿಜೆಪಿ</a></p>.<p>‘ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಬಾವಿಯಲ್ಲಿ ಇಟ್ಟಿದೆ ಎಂದು ಸಿಂಎ ಹೇಳಿರುವುದು ಅಕ್ಷರಶಃ ಸತ್ಯ. ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ, ಉಗ್ರಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೆದರುತ್ತಿದ್ದಾರೆ. ಇದೆಲ್ಲ ಗಮನಿಸಿದಾಗ, ಪಿಸುಮಾತಿನ ಪ್ರಹಸನ ಸಿದ್ದರಾಮಯ್ಯ ನಿರ್ದೇಶನದಲ್ಲಿ ಮೂಡಿಬಂದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.</p>.<p>ಕಾಂಗ್ರೆಸ್ ನಾಯಕ ಸಲೀಂ ಮತ್ತು ಉಗ್ರಪ್ಪ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಉಗ್ರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಕಾಂಗ್ರೆಸ್ ದುರ್ಬಲರ ವಿರುದ್ಧವಷ್ಟೇ ಕ್ರಮ ಕೈಗೊಳ್ಳುತ್ತದೆ ಎಂದು ಬಿಜೆಪಿ ಟೀಕಿಸಿದೆ.</p>.<p>‘ಶಿಸ್ತು ಸಮಿತಿ ನೋಟಿಸ್ ನೀಡಿದ್ದರೂ ಉತ್ತರಿಸದೇ ಇರುವ ಉಗ್ರಪ್ಪ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಫಲರಾಗಿದ್ದಾರೆ. ಡಿಕೆಶಿ ಅವರಿಗೆ ಉಗ್ರಪ್ಪ ಕಂಡರೆ ಭಯವೋ ಅಥವಾ ಉಗ್ರಪ್ಪ ಅವರು ಸಿದ್ದರಾಮಯ್ಯ ಅವರ ಬಣವೆಂಬ ಭೀತಿಯೋ’ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.</p>.<p><strong>ಓದಿ:</strong><a href="https://www.prajavani.net/karnataka-news/bjp-congress-tweet-war-on-covid-vaccination-india-achievement-of-1-billion-jabs-feat-877598.html" itemprop="url">ಲಸಿಕೆ ವಿತರಣೆಯ ಪ್ರಗತಿಗೆ ವಿಶ್ವವೇ ಬೆರಗಾಗಿದ್ದರೂ ಕಾಂಗ್ರೆಸ್ ಕೊಂಕು: ಬಿಜೆಪಿ</a></p>.<p>‘ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಬಾವಿಯಲ್ಲಿ ಇಟ್ಟಿದೆ ಎಂದು ಸಿಂಎ ಹೇಳಿರುವುದು ಅಕ್ಷರಶಃ ಸತ್ಯ. ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ, ಉಗ್ರಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೆದರುತ್ತಿದ್ದಾರೆ. ಇದೆಲ್ಲ ಗಮನಿಸಿದಾಗ, ಪಿಸುಮಾತಿನ ಪ್ರಹಸನ ಸಿದ್ದರಾಮಯ್ಯ ನಿರ್ದೇಶನದಲ್ಲಿ ಮೂಡಿಬಂದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.</p>.<p>ಕಾಂಗ್ರೆಸ್ ನಾಯಕ ಸಲೀಂ ಮತ್ತು ಉಗ್ರಪ್ಪ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಉಗ್ರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>