<p><strong>ಬೆಂಗಳೂರು</strong>: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಜೆಪಿ ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.</p>.<p>ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ರಾಜೇಶ್ ಗೌಡ ಅವರಿಗೆ ಶಿರಾ ವಿಧಾನಸಭೆ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದ್ದರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮುನಿರತ್ನ ಅವರಿಗೆ ರಾಜರಾಜೇಶ್ವರಿ ನಗರದಿಂದಟಿಕೆಟ್ ನೀಡಲಾಗಿದೆ.</p>.<p>ಪಕ್ಷದ ರಾಷ್ಟ್ರೀಯಅಧ್ಯಕ್ಷ ಜೆ.ಪಿ.ನಡ್ಡಾ ನಿರ್ದೇಶನದ ಮೇರೆಗೆ ಪಕ್ಷದ ಕೇಂದ್ರ ಚುನಾವಣೆ ಸಮಿತಿಯು ಈ ಅಭ್ಯರ್ಥಿಗಳನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.</p>.<p>ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭೆ ಕ್ಷೇತ್ರ ತೆರವಾಗಿತ್ತು. ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.</p>.<p>ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.</p>.<p>ಮತದಾನ ಪ್ರಕ್ರಿಯೆ ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ. ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.</p>.<p><strong>ಮಾಜಿ ಸಂಸದರ ಪುತ್ರ ರಾಜೇಶ್ಗೌಡ</strong></p>.<p>ಶಿರಾ ವಿಧಾನಸಭಾ ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 3 ಬಾರಿ ಸಂಸದರಾಗಿದ್ದ ಸಿ.ಪಿ.ಮೂಡಲಗಿರಿಯಪ್ಪ ಅವರ ಪುತ್ರ ಡಾ.ಸಿ.ಎಂ.ರಾಜೇಶ್ಗೌಡಅವರುಬಿಜೆಪಿಸೇರ್ಪಡೆಯಾಗಿರುವುದು ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಜೆಪಿ ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.</p>.<p>ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ರಾಜೇಶ್ ಗೌಡ ಅವರಿಗೆ ಶಿರಾ ವಿಧಾನಸಭೆ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದ್ದರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮುನಿರತ್ನ ಅವರಿಗೆ ರಾಜರಾಜೇಶ್ವರಿ ನಗರದಿಂದಟಿಕೆಟ್ ನೀಡಲಾಗಿದೆ.</p>.<p>ಪಕ್ಷದ ರಾಷ್ಟ್ರೀಯಅಧ್ಯಕ್ಷ ಜೆ.ಪಿ.ನಡ್ಡಾ ನಿರ್ದೇಶನದ ಮೇರೆಗೆ ಪಕ್ಷದ ಕೇಂದ್ರ ಚುನಾವಣೆ ಸಮಿತಿಯು ಈ ಅಭ್ಯರ್ಥಿಗಳನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.</p>.<p>ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭೆ ಕ್ಷೇತ್ರ ತೆರವಾಗಿತ್ತು. ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.</p>.<p>ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.</p>.<p>ಮತದಾನ ಪ್ರಕ್ರಿಯೆ ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ. ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.</p>.<p><strong>ಮಾಜಿ ಸಂಸದರ ಪುತ್ರ ರಾಜೇಶ್ಗೌಡ</strong></p>.<p>ಶಿರಾ ವಿಧಾನಸಭಾ ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 3 ಬಾರಿ ಸಂಸದರಾಗಿದ್ದ ಸಿ.ಪಿ.ಮೂಡಲಗಿರಿಯಪ್ಪ ಅವರ ಪುತ್ರ ಡಾ.ಸಿ.ಎಂ.ರಾಜೇಶ್ಗೌಡಅವರುಬಿಜೆಪಿಸೇರ್ಪಡೆಯಾಗಿರುವುದು ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>