ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚುನಾವಣೆಯ ಬಳಿಕ ಬಿಎಸ್‌ವೈ ಬದಲಾವಣೆ ನಿಶ್ಚಿತ’–ಬಸನಗೌಡ ಪಾಟೀಲ ಯತ್ನಾಳ

Last Updated 20 ಮಾರ್ಚ್ 2021, 19:51 IST
ಅಕ್ಷರ ಗಾತ್ರ

ವಿಜಯಪುರ: ‘ಪಶ್ಚಿಮ ಬಂಗಾಳ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ಖಚಿತ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಗಾಗಲೇ ಉತ್ತರಾಖಂಡದಲ್ಲಿ ಯಾವ ರೀತಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆಯೋ ಅದೇ ರೀತಿ ಕರ್ನಾಟಕ ಹಾಗೂಹರಿಯಾಣ ಸಿ.ಎಂ ಬದಲಾವಣೆ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಭ್ರಷ್ಟಾಚಾರ, ಕುಟುಂಬ ರಾಜಕಾರಣದಲ್ಲಿ ಮುಳುಗಿರುವ ಬಿಎಸ್‌ವೈ ಅವರನ್ನು ಮುಂದಿಟ್ಟು ಕೊಂಡುಮುಂದಿನ ವಿಧಾನಸಭೆ ಚುನಾವಣೆಗೆ ಹೋಗಲು ಸಾಧ್ಯ ವಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆ ಪಿಯ ಕೊನೆಯ ಮುಖ್ಯಮಂತ್ರಿ ಇವರೊಬ್ಬರೇ ಎಂದಾಗಬಾರದು. ಇನ್ನೂ ಹಲವರು ಆಗಬೇಕಾಗಿದೆ. ಬಿಸ್‌ವೈ ಅವರಿಗೆ ಶಾಸಕಾಂಗ ಪಕ್ಷದ ಸಭೆ ಕರೆಯುವ
ಇಚ್ಛೆ ಇಲ್ಲ, ಅವರ ಉದ್ದೇಶವೇ ಬೇರೆ ಯಾಗಿದೆ. ಅಧಿಕಾರಕ್ಕೆ ತಂದ ಬಿಜೆಪಿ ಶಾಸಕರನ್ನು ಕಡೆಗಣಿಸಿ,ಬಿಜೆಪಿಯ 38, ಕಾಂಗ್ರೆಸ್ 40 ಹಾಗೂ ಜೆಡಿಎಸ್ ಶಾಸ ಕರಿಗೆ ಮಾತ್ರ ಅನುದಾನ‌ ನೀಡಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT