‘ಮೀಸಲಾತಿ ಹೆಚ್ಚಿದ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಿದ ಕಾರಣಕ್ಕೆ ನಾವು ಹೋರಾಟಕ್ಕೆ ಮುಂದಾಗಿರುವ ಮಾಹಿತಿ ಸಿಗುತ್ತಿದ್ದಂತೆ ಗುರುವಾರ ರಾತ್ರಿ ಮುಖ್ಯ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲು ಪತ್ರ ಬರೆದಿದೆ. ಈ ಸರ್ಕಾರಕ್ಕೆ ಚುನಾವಣೆಗಿಂತ ಈ ದಲಿತ ಸಮುದಾಯದವರ ಬಗ್ಗೆ ಕಾಳಜಿ ಇದ್ದರೆ, ಮೀಸಲಾತಿ ಹೆಚ್ಚಳದ ಕಾಯ್ದೆಗೆ ರಾಜ್ಯಪಾಲರು ಸಹಿ ಹಾಕಿದ
ತಕ್ಷಣವೇ 26 ಸಂಸದರನ್ನು ಕರೆದುಕೊಂಡು ಡಬಲ್ ಎಂಜಿನ್ ಸರ್ಕಾರದ ಮೂಲಕ ಒತ್ತಡ ಹಾಕಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ, ಸಂವಿಧಾನ 9ನೇ ಶೆಡ್ಯೂಲ್ನಲ್ಲಿ ಸೇರಿಸಬೇಕಿತ್ತು. ಆದರೆ, ಈಗ ನಮ್ಮ ಹೋರಾಟಕ್ಕೆ ಹೆದರಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.