ಕಾಂಗ್ರೆಸ್ ನಾಯಕರೊಂದಿಗೆ ಶರತ್ ಬಚ್ಚೇಗೌಡ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಶರತ್ ಬಚ್ಚೇಗೌಡ ಪಕ್ಷಕ್ಕೆ ಬರುವ ಕುರಿತು ಮಾತುಕತೆ ನಡೆಯುತ್ತಿದೆ. ಇನ್ನು 15 ದಿನಗಳಲ್ಲಿ ತೀರ್ಮಾನವಾಗಲಿದೆ. ನಮ್ಮ ಪಕ್ಷ ಮತ್ತು ಶರತ್ ಸೇರಿ ಗ್ರಾ.ಪಂ. ಚುನಾವಣೆಯಲ್ಲಿ ಎದುರಿಸಿದ್ದರು. ಹೊಸಕೋಟೆ ಕ್ಷೇತ್ರದಲ್ಲಿ ಶೇ 70 ರಷ್ಟು ಬೆಂಬಲಿತರು ಗೆದ್ದಿದ್ದಾರೆ. ಅದಕ್ಕೆ ಧನ್ಯವಾದ ಹೇಳಲು ಭೇಟಿ ಮಾಡಿದ್ದರು' ಎಂದರು.