ಬೆಂಗಳೂರು: ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೊ ಯಾತ್ರೆ ಸಂಬಂಧ ನಾಯಕರಿಗೆ ಸ್ವಾಗತ ಕೋರಲು ಅಳವಡಿಸಿದ್ದಫ್ಲೆಕ್ಸ್ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದಿದೆ.
‘ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ. ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ’ ಎಂದು ವಾಗ್ದಾಳಿ ನಡೆಸಿದೆ.
‘ಭಾರತ್ ಜೋಡೊ ಯಾತ್ರೆಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್ಗಳ ಮೇಲೆ ತೋರಿಸುತ್ತಿದೆ’ ಎಂದು ಕೆಪಿಸಿಸಿ ಆರೋಪಿಸಿದೆ.
‘ಕೈಲಾಗದವರು ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೇ?’ ಎಂದು ಪ್ರಶ್ನಿಸಿದೆ.
ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ.#BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್ಗಳ ಮೇಲೆ ತೋರಿಸುತ್ತಿದೆ.