<p><strong>ಬೆಂಗಳೂರು</strong>: ಮಡಿಕೇರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಹಿಂದುಳಿದವರೆಂದರೆ ಬಿಜೆಪಿಯ ಮನುವಾದಿಗಳಿಗೆ ಕೆಂಡದಂತಹ ಕೋಪವೆಂದು ಅವರು ಹರಿಹಾಯ್ದಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಎಂ.ಪಿ.ಪಾಟೀಲ, ‘ಬಿಜೆಪಿಯ ಮನುವಾದಿಗಳಿಗೆ ಶೂದ್ರರು-ಹಿಂದುಳಿದವರೆಂದರೆ ಕೆಂಡದಂತಹ ಕೋಪ ಎಂಬುದಕ್ಕೆ ಮಡಿಕೇರಿಯಲ್ಲಿ ನಡೆದ ಘಟನೆಯೇ ಸಾಕ್ಷಿ. ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸಲಾಗುತ್ತಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಹೀನ ಕೃತ್ಯಗಳ ಮೂಲಕ ತಮ್ಮ ಸಂಸ್ಕೃತಿಯನ್ನು ಬಿಜೆಪಿಗರು ತೋರಿದ್ದಾರೆ. ಬಸವಣ್ಣ-ರಾಯಣ್ಣ-ದಾಸ ಶ್ರೇಷ್ಠರನ್ನು ಕಂಡಂತಹ ಈ ನಾಡಿನಲ್ಲಿ ನಿಮ್ಮ ಕುತಂತ್ರಗಳು ನಡೆಯದು’ ಎಂದೂ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದ್ದಾರೆ.</p>.<p>ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆ ಕುಳಿತರು. ಸುಮಾರು ಅರ್ಧಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಡಿಕೇರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಹಿಂದುಳಿದವರೆಂದರೆ ಬಿಜೆಪಿಯ ಮನುವಾದಿಗಳಿಗೆ ಕೆಂಡದಂತಹ ಕೋಪವೆಂದು ಅವರು ಹರಿಹಾಯ್ದಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಎಂ.ಪಿ.ಪಾಟೀಲ, ‘ಬಿಜೆಪಿಯ ಮನುವಾದಿಗಳಿಗೆ ಶೂದ್ರರು-ಹಿಂದುಳಿದವರೆಂದರೆ ಕೆಂಡದಂತಹ ಕೋಪ ಎಂಬುದಕ್ಕೆ ಮಡಿಕೇರಿಯಲ್ಲಿ ನಡೆದ ಘಟನೆಯೇ ಸಾಕ್ಷಿ. ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸಲಾಗುತ್ತಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಹೀನ ಕೃತ್ಯಗಳ ಮೂಲಕ ತಮ್ಮ ಸಂಸ್ಕೃತಿಯನ್ನು ಬಿಜೆಪಿಗರು ತೋರಿದ್ದಾರೆ. ಬಸವಣ್ಣ-ರಾಯಣ್ಣ-ದಾಸ ಶ್ರೇಷ್ಠರನ್ನು ಕಂಡಂತಹ ಈ ನಾಡಿನಲ್ಲಿ ನಿಮ್ಮ ಕುತಂತ್ರಗಳು ನಡೆಯದು’ ಎಂದೂ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದ್ದಾರೆ.</p>.<p>ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆ ಕುಳಿತರು. ಸುಮಾರು ಅರ್ಧಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>