<p><strong>ಬೆಂಗಳೂರು: </strong>ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯ ಕುರಿತು ಚರ್ಚೆಗಳು ಒಂದೆಡೆಯಾದರೆ, ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಗೆ ಕಾರಣ ಬಹಿರಂಗ ಪಡಿಸಲಿ ಎಂದು ವಿರೋಧ ಪಕ್ಷಗಳು ಕುಟುಕುತ್ತಿವೆ. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೇ ಸರಿ' ಎಂದು ಸಿದ್ದರಾಮಯ್ಯ ಅವರು ಮಾಡಿರುವ ಟೀಕೆಗೆ ಬಿಜೆಪಿ ತಿರುಗೇಟು ನೀಡಿದೆ.</p>.<p>'2019ರಲ್ಲಿ ನೆರೆ ಬಂದಾಗ ನಿಮ್ಮಲ್ಲಿ ರಾಜಕೀಯ ಅಸ್ಥಿರತೆಯನ್ನೇ ಮೂಡಿಸಿದ್ದ ಸಂದರ್ಭದಲ್ಲಿ ನಿಮ್ಮನ್ನು ಗೆಲ್ಲಿಸಿದ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಲು ಕಣ್ಣು ನೋವಿನ ಅಡ್ಡಿ ಹೇಳಿದ್ದು ಮರೆತು ಹೋಯಿತೇ?' ಎಂದು ಬಿಜೆಪಿ ರಾಜ್ಯ ಘಟಕದ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಪ್ರಶ್ನಿಸಲಾಗಿದೆ.</p>.<p>'ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆ ಬೆಳಗಾವಿಯಲ್ಲಿ ಹೇಳಿದ್ದರು.</p>.<p>ಹಿಂದೆ ಕಾಂಗ್ರೆಸ್ ಪಕ್ಷ ರಾಜ್ಯದ ಮುಖ್ಯಮಂತ್ರಿಗಳಿಂದ ರಾಜೀನಾಮೆ ಪಡೆದಿರುವ ಘಟನೆಗಳನ್ನು ನೆನಪಿಸಿಕೊಳ್ಳುವಂತೆ ಬಿಜೆಪಿ ಟ್ವೀಟಿಸಿದೆ. 'ಮುಖ್ಯಮಂತ್ರಿ ಸ್ಥಾನದಲ್ಲಿದ್ದ ವೀರೇಂದ್ರ ಪಾಟೀಲ ಅವರನ್ನು ಅನಾರೋಗ್ಯದಲ್ಲಿರುವಾಗಲೇ, ವಿಮಾನ ನಿಲ್ದಾಣದಲ್ಲಿ ರಾಜೀವ್ ಗಾಂಧಿ "ಮುಖ್ಯಮಂತ್ರಿ ಪದವಿಯಿಂದ ಕಿತ್ತೆಸೆದದ್ದನ್ನು" ರಾಜ್ಯದ ಜನತೆ ಮರೆತಿಲ್ಲ' ಎಂದು ಪ್ರಕಟಿಸಿದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/karnataka-news/yediyurappa-resigns-karnataka-chief-minister-bjp-congress-siddaramaiah-851953.html">ಯಡಿಯೂರಪ್ಪಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ | Prajavani</a></p>.<p>'ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ ಕೂಡಾ ವಿಧಾನಸಭೆ ವಿಸರ್ಜನೆಗೆ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು' ಅವರೆಲ್ಲರೂ ಮಧ್ಯದಲ್ಲೇ ಯಾವ ಕಾರಣದಿಂದ ಹೊರನಡೆದರು ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪಿ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯ ಕುರಿತು ಚರ್ಚೆಗಳು ಒಂದೆಡೆಯಾದರೆ, ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಗೆ ಕಾರಣ ಬಹಿರಂಗ ಪಡಿಸಲಿ ಎಂದು ವಿರೋಧ ಪಕ್ಷಗಳು ಕುಟುಕುತ್ತಿವೆ. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೇ ಸರಿ' ಎಂದು ಸಿದ್ದರಾಮಯ್ಯ ಅವರು ಮಾಡಿರುವ ಟೀಕೆಗೆ ಬಿಜೆಪಿ ತಿರುಗೇಟು ನೀಡಿದೆ.</p>.<p>'2019ರಲ್ಲಿ ನೆರೆ ಬಂದಾಗ ನಿಮ್ಮಲ್ಲಿ ರಾಜಕೀಯ ಅಸ್ಥಿರತೆಯನ್ನೇ ಮೂಡಿಸಿದ್ದ ಸಂದರ್ಭದಲ್ಲಿ ನಿಮ್ಮನ್ನು ಗೆಲ್ಲಿಸಿದ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಲು ಕಣ್ಣು ನೋವಿನ ಅಡ್ಡಿ ಹೇಳಿದ್ದು ಮರೆತು ಹೋಯಿತೇ?' ಎಂದು ಬಿಜೆಪಿ ರಾಜ್ಯ ಘಟಕದ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಪ್ರಶ್ನಿಸಲಾಗಿದೆ.</p>.<p>'ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆ ಬೆಳಗಾವಿಯಲ್ಲಿ ಹೇಳಿದ್ದರು.</p>.<p>ಹಿಂದೆ ಕಾಂಗ್ರೆಸ್ ಪಕ್ಷ ರಾಜ್ಯದ ಮುಖ್ಯಮಂತ್ರಿಗಳಿಂದ ರಾಜೀನಾಮೆ ಪಡೆದಿರುವ ಘಟನೆಗಳನ್ನು ನೆನಪಿಸಿಕೊಳ್ಳುವಂತೆ ಬಿಜೆಪಿ ಟ್ವೀಟಿಸಿದೆ. 'ಮುಖ್ಯಮಂತ್ರಿ ಸ್ಥಾನದಲ್ಲಿದ್ದ ವೀರೇಂದ್ರ ಪಾಟೀಲ ಅವರನ್ನು ಅನಾರೋಗ್ಯದಲ್ಲಿರುವಾಗಲೇ, ವಿಮಾನ ನಿಲ್ದಾಣದಲ್ಲಿ ರಾಜೀವ್ ಗಾಂಧಿ "ಮುಖ್ಯಮಂತ್ರಿ ಪದವಿಯಿಂದ ಕಿತ್ತೆಸೆದದ್ದನ್ನು" ರಾಜ್ಯದ ಜನತೆ ಮರೆತಿಲ್ಲ' ಎಂದು ಪ್ರಕಟಿಸಿದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/karnataka-news/yediyurappa-resigns-karnataka-chief-minister-bjp-congress-siddaramaiah-851953.html">ಯಡಿಯೂರಪ್ಪಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ | Prajavani</a></p>.<p>'ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ ಕೂಡಾ ವಿಧಾನಸಭೆ ವಿಸರ್ಜನೆಗೆ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು' ಅವರೆಲ್ಲರೂ ಮಧ್ಯದಲ್ಲೇ ಯಾವ ಕಾರಣದಿಂದ ಹೊರನಡೆದರು ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪಿ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>