ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ್ ಶಹಾಪುರ, ಜೆಡಿಎಸ್ ತೊರೆದು ಬಂದಿರುವ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪದವೀಧರ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಹಾಲಿ ಸದಸ್ಯ ಹಣಮಂತ ರುದ್ರಪ್ಪ ನಿರಾಣಿ ಮತ್ತು ಎಂ.ವಿ.ರವಿಶಂಕರ್ ಅವರಿಗೆ ಟಿಕೆಟ್ ಖಚಿತವಾಗಿದೆ. ವಿಧಾನಪರಿಷತ್ನಲ್ಲಿ ಬಹುಮತ ಪಡೆಯಲು ಬಿಜೆಪಿಗೆ ಒಂದು ಸ್ಥಾನದ ಕೊರತೆ ಇದ್ದು, ಈ ಚುನಾವಣೆಗಳ ಬಳಿಕ ಬಿಜೆಪಿ ಬಹುಮತ ಪಡೆಯಲಿದೆ.