ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಭ್ರಷ್ಟಾಚಾರ ಕೋವಿಡ್‌ಗಿಂತ ಅಪಾಯಕಾರಿ: ಕಾಂಗ್ರೆಸ್‌ ವಾಗ್ದಾಳಿ

‘ಪ್ರಜಾವಾಣಿ’ ವರದಿ ಉಲ್ಲೇಖಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ
Last Updated 7 ಆಗಸ್ಟ್ 2022, 19:46 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ಸರ್ಕಾರದಲ್ಲಿನ ಶೇಕಡ 40 ರಷ್ಟು ಕಮಿಷನ್‌ ಭ್ರಷ್ಟಾಚಾರದ ಸೋಂಕು ಕೋವಿಡ್‌ಗಿಂತಲೂ ಅಪಾಯಕಾರಿ’ ಎಂದು ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ.

ಜಾತಿ, ಸಮುದಾಯ ಕೇಂದ್ರಿತ ನಿಗಮಗಳಲ್ಲಿನ ಭ್ರಷ್ಟಾಚಾರದ ಕುರಿತು ‘ಪ್ರಜಾವಾಣಿ’ಯ ಭಾನುವಾರದ ಸಂಚಿಕೆಯಲ್ಲಿ ಪ್ರಕಟವಾದ ‘ಒಳನೋಟ’ದ ವಿಶೇಷ ವರದಿಗಳನ್ನು ಕೆಪಿಸಿಸಿಯ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ನಿಗಮ, ಮಂಡಳಿಗಳಲ್ಲಿ ಬಿಜೆಪಿ ಭ್ರಷ್ಟೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಬಡವರ ಹಿಂದುಳಿದವರ ಏಳಿಗೆಯ ಬದಲು ಭ್ರಷ್ಟರ ಏಳಿಗೆಯಾಗುತ್ತಿದೆ. ಬಡವರನ್ನು ತಲುಪಬೇಕಾದ ನೂರಾರು ಕೋಟಿ ಅನುದಾನ ಬಿಜೆಪಿ ಭ್ರಷ್ಟರ ತಿಜೋರಿ ಸೇರುತ್ತಿದೆ’ ಎಂದು ಆರೋಪಿಸಿದೆ.

ಸಮಾಜ ಕಲ್ಯಾಣ ಇಲಾಖೆ ಸ್ವಯಂ ಕಲ್ಯಾಣ ಇಲಾಖೆ ಆಗಿರುವಾಗ ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟರ ಕಲ್ಯಾಣ ಆಗುತ್ತಿರು
ವುದರಲ್ಲಿ ಆಶ್ಚರ್ಯವಿಲ್ಲ.

ಇಲಾಖಾ ತನಿಖೆಯಲ್ಲಿ ಮೇಲ್ನೋ ಟಕ್ಕೆ ಹಗರಣ ಸಾಬೀತಾಗಿದ್ದರೂ ಸರ್ಕಾರ ಉನ್ನತ ತನಿಖೆಗೆ ಹಿಂದೇಟು ಹಾಕುತ್ತಿದೆ. ಭ್ರಷ್ಟರ ರಕ್ಷಣೆಗಾಗಿ ಪರಿಶಿಷ್ಟರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT