ಈ ಕುರಿತು ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರ ಸಭೆಯ ಬಳಿಕ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸುತ್ತಿರುವವರು ಕೇವಲ ಎಡಪಂಥೀಯರು. ಇವರ ಒತ್ತಡಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಾಗಿಲ್ಲ. ಸತ್ಯ ಸಂಗತಿ ಮಕ್ಕಳಿಗೆ ಹೇಳುವುದನ್ನು ವಿರೋಧಿಸುತ್ತಾರೆ. ಅವರ ಕಾರ್ಯಸೂಚಿಯ ವಿಷಯಗಳನ್ನೇ ಪಠ್ಯ ಪುಸ್ತಕಗಳಲ್ಲಿ ತುಂಬಿಸಿದ್ದಾರೆ. ಅದನ್ನು ಕೈಬಿಟ್ಟಿರುವುದು ಅವರ ಸಿಟ್ಟಿಗೆ ಕಾರಣ ಎಂಬ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು ಎಂದರು.