ಬೆಂಗಳೂರು: ದೇಶಪ್ರೇಮದ ನಾಟಕವಾಡುವ ಬಿಜೆಪಿಗೆ ರಾಷ್ಟ್ರಧ್ವಜಕ್ಕಿಂತ ಈಶ್ವರಪ್ಪ ಅವರ ಸಚಿವ ಸ್ಥಾನವೇ ಮುಖ್ಯವಾಗಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಕೆಂಪುಕೋಟೆಯ ಮೇಲೆ ಮುಂದೊಂದು ದಿನ ಭಗವಧ್ವಜ ಹಾರಲಿದೆ ಎಂಬ ಈಶ್ವರಪ್ಪ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್, ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದೂ, ಅವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.
ದೇಶಪ್ರೇಮದ ನಾಟಕವಾಡುವ ಬಿಜೆಪಿಗೆ ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ಯಾವುದು ನಿಮ್ಮ ಆಯ್ಕೆ ಎಂಬ ಪ್ರಶ್ನೆಯನ್ನು ಇಟ್ಟಿದ್ದೆವು.@BJP4Karnataka ಗೆ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯವಾಗಿದೆ. ಈ ಘಟನೆಯಿಂದ ಬಿಜೆಪಿಯ ದೇಶಪ್ರೇಮದ ಹಿಂದಿರುವ ಸ್ವಾರ್ಥದ ಮುಖವಾಡ ಬಯಲಾಗಿದೆ. 4/6#ದೇಶದ್ರೋಹಿಬಿಜೆಪಿ
— Siddaramaiah (@siddaramaiah) February 20, 2022
ಈ ಮಧ್ಯೆ, ವಿಷಯಕ್ಕೆ ಸಂಬಂಧಿಸಿದಂತೆ ಸಿದ್ದರಾಮಮ್ಯ ಅವರು ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.
‘ದೇಶಪ್ರೇಮದ ನಾಟಕವಾಡುವ ಬಿಜೆಪಿಗೆ ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ಯಾವುದು ನಿಮ್ಮ ಆಯ್ಕೆ ಎಂಬ ಪ್ರಶ್ನೆಯನ್ನು ಇಟ್ಟಿದ್ದೆವು. ಬಿಜೆಪಿಗೆ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯವಾಗಿದೆ. ಈ ಘಟನೆಯಿಂದ ಬಿಜೆಪಿಯ ದೇಶಪ್ರೇಮದ ಹಿಂದಿರುವ ಸ್ವಾರ್ಥದ ಮುಖವಾಡ ಬಯಲಾಗಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
‘ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಬಿಜೆಪಿಯವರಿಗೆ ಸಣ್ಣ ವಿಷಯ ಇರಬಹುದು. ಆದರೆ ನಮಗೆ ಇದು ಬಹಳ ಗಂಭೀರವಾದ ಸಂಗತಿ. ರಾಷ್ಟ್ರಧ್ವಜ ಹಿಡಿದು ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಹುತಾತ್ಮರ ತ್ಯಾಗ ವ್ಯರ್ಥವಾಗಲು ನಾವು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನಸಲ್ಲಿ ದೇಶ ಪ್ರೇಮ, ದೇಶದ ಬಗ್ಗೆ ಗೌರವವಿದ್ದರೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ತಕ್ಷಣ ವಜಾಗೊಳಿಸಿ, ಅಧಿಕಾರಕ್ಕಿಂತ ದೇಶ ಮೊದಲು ಎಂದು ಸಾಬೀತು ಮಾಡಲಿ’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
‘ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದಿದ್ದರೆ ಅವರಿಗೆ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ, ಭಕ್ತಿ ಇರುತ್ತಿತ್ತು. ಅಂದೂ ಬಿಜೆಪಿ ದೇಶದ ಪರ ಇರಲಿಲ್ಲ, ಇಂದೂ ಇಲ್ಲ‘ ಎಂದು ಅವರು ಮೂದಲಿಸಿದ್ದಾರೆ.
ಕೇಸರಿ ಶಾಲು ದ್ವೇಷಕ್ಕೆ ಬಳಸುವುದು ಧರ್ಮದ್ರೋಹ
‘ಕೇಸರಿ ಶಾಲನ್ನು ಅಮಾನವೀಯ, ದ್ವೇಷ ಹರಡುವ ಕಾರಣಗಳಿಗೆ ಬಳಸಬಾರದು. ಕೇಸರಿ ‘ತ್ಯಾಗದ ಸಂಕೇತ’. ಅದನ್ನು ದ್ವೇಷ ಸಾಧನೆಗೆ ಬಳಸುವುದೇ ‘ಧರ್ಮ ದ್ರೋಹ’. ಎಳೆಯ ಮಕ್ಕಳಲ್ಲಿ ದ್ವೇಷ ತುಂಬುವವರು ‘ಜೀವ ವಿರೋಧಿಗಳು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
‘ಸಿಂಧೂರ, ಹಿಜಾಬ್ ಎರಡೂ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ, ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾರದೋ ಷಡ್ಯಂತ್ರಕ್ಕೆ ನಮ್ಮ ಸಂಸ್ಕೃತಿ ಮತ್ತು ನಂಬಿಕೆಗಳು ಬಲಿಯಾಗಬಾರದು‘ ಎಂದು ಅವರು ಇದೇ ವೇಳೆ ಆಶಯ ವ್ಯಕ್ತಪಡಿಸಿದ್ದಾರೆ.
ಸಿಂಧೂರ, ಹಿಜಾಬ್ ಎರಡೂ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ - ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಇಲ್ಲ.
— Siddaramaiah (@siddaramaiah) February 20, 2022
ಯಾರದೋ ಷಡ್ಯಂತ್ರಕ್ಕೆ ನಮ್ಮ ಸಂಸ್ಕೃತಿ ಮತ್ತು ನಂಬಿಕೆಗಳು ಬಲಿಯಾಗಬಾರದು. 1/6#HijabControversy
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.