<p><strong>ಬೆಳಗಾವಿ:</strong> ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕರ್ನಾಟಕದ ಬಿಜೆಪಿ ಸರ್ಕಾರದ ಪತನಕ್ಕೆ ಮುನ್ನುಡಿ ಆಗುತ್ತದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.</p>.<p>ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೇಶ ಮತ್ತು ಕರ್ನಾಟಕದಲ್ಲಿ ಬದಲಾವಣೆ ಆಗುವುದು ಗೋಡೆ ಮೇಲಿನ ಬರಹದಷ್ಟೆ ಸ್ಪಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ನಾಲಾಯಕ್ ಸರ್ಕಾರ ಬದಲಾಯಿಸಲು ಜನ ಕಾಯುತ್ತಿದ್ದಾರೆ’ ಎಂದರು.</p>.<p>‘ಸಚಿವರು ಮುಖ್ಯಮಂತ್ರಿ ಮೇಲೆ, ಮುಖ್ಯಮಂತ್ರಿ ಸಚಿವರ ಮೇಲೆ ಆರೋಪಿಸುತ್ತಿದ್ದಾರೆ. ರಾಜ್ಯದ ಸಚಿವರೊಬ್ಬರು ಕೇಂದ್ರದ ಮೇಲೆ ದೂರಿದ್ದಾರೆ. ಇಲ್ಲಿನ ಮಂತ್ರಿಗಳು ನಾಲಾಯಕ್ ಎಂದು ಕೇಂದ್ರದವರು ಹೇಳುತ್ತಿದ್ದಾರೆ. ಹೀಗಾಗಿ, ಸತೀಶ ಜಾರಕಿಹೊಳಿ ಗೆಲುವಿನ ಬಳಿಕ ಈ ಸರ್ಕಾರ ತಾನಾಗಿಯೇ ಮತ್ತು ತನ್ನ ತಪ್ಪಿನಿಂದಾಗಿಯೇ ಪತನಗೊಳ್ಳುತ್ತದೆ. ಬಳಿಕ ಜನರ ಮತಗಳಿಂದ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಅವರ ಪಕ್ಷದವರೇ ಮುಖ್ಯಮಂತ್ರಿ ಹಾಗೂ ಅವರ ಪುತ್ರನ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರಿಂದಲೇ ನಾಯಕತ್ವ ಬದಲಾವಣೆ ಆಗುತ್ತದೆ. ರಾಜ್ಯದ ಆಡಳಿತ ಯಂತ್ರ ಕುಸಿದಿದೆ. ಹೀಗಾಗಿ ಈ ಸರ್ಕಾರ ಅಧಿಕಾರದಲ್ಲಿ ಇರಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕರ್ನಾಟಕದ ಬಿಜೆಪಿ ಸರ್ಕಾರದ ಪತನಕ್ಕೆ ಮುನ್ನುಡಿ ಆಗುತ್ತದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.</p>.<p>ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೇಶ ಮತ್ತು ಕರ್ನಾಟಕದಲ್ಲಿ ಬದಲಾವಣೆ ಆಗುವುದು ಗೋಡೆ ಮೇಲಿನ ಬರಹದಷ್ಟೆ ಸ್ಪಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ನಾಲಾಯಕ್ ಸರ್ಕಾರ ಬದಲಾಯಿಸಲು ಜನ ಕಾಯುತ್ತಿದ್ದಾರೆ’ ಎಂದರು.</p>.<p>‘ಸಚಿವರು ಮುಖ್ಯಮಂತ್ರಿ ಮೇಲೆ, ಮುಖ್ಯಮಂತ್ರಿ ಸಚಿವರ ಮೇಲೆ ಆರೋಪಿಸುತ್ತಿದ್ದಾರೆ. ರಾಜ್ಯದ ಸಚಿವರೊಬ್ಬರು ಕೇಂದ್ರದ ಮೇಲೆ ದೂರಿದ್ದಾರೆ. ಇಲ್ಲಿನ ಮಂತ್ರಿಗಳು ನಾಲಾಯಕ್ ಎಂದು ಕೇಂದ್ರದವರು ಹೇಳುತ್ತಿದ್ದಾರೆ. ಹೀಗಾಗಿ, ಸತೀಶ ಜಾರಕಿಹೊಳಿ ಗೆಲುವಿನ ಬಳಿಕ ಈ ಸರ್ಕಾರ ತಾನಾಗಿಯೇ ಮತ್ತು ತನ್ನ ತಪ್ಪಿನಿಂದಾಗಿಯೇ ಪತನಗೊಳ್ಳುತ್ತದೆ. ಬಳಿಕ ಜನರ ಮತಗಳಿಂದ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಅವರ ಪಕ್ಷದವರೇ ಮುಖ್ಯಮಂತ್ರಿ ಹಾಗೂ ಅವರ ಪುತ್ರನ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರಿಂದಲೇ ನಾಯಕತ್ವ ಬದಲಾವಣೆ ಆಗುತ್ತದೆ. ರಾಜ್ಯದ ಆಡಳಿತ ಯಂತ್ರ ಕುಸಿದಿದೆ. ಹೀಗಾಗಿ ಈ ಸರ್ಕಾರ ಅಧಿಕಾರದಲ್ಲಿ ಇರಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>