ವಿಜಯಪುರ: ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಹಣ ಹಂಚಿ ಮತ ಖರೀದಿಸುವ ತಯಾರಿಯಲ್ಲಿದೆ ಎಂಬ ಸಂಶಯ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 'ಜೆಡಿಎಸ್ ಮಿಷನ್ 123' ತರಲು ಸಿಂದಗಿ, ಹಾನಗಲ್ ಉಪಚುನಾವಣೆ ವೇದಿಕೆಯಾಗಿದೆ ಎಂದು ಹೇಳಿದರು.
ದೇವೇಗೌಡರು ಸಿಂದಗಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ತಂದು ಉತ್ತಮ ಕೆಲಸ ಮಾಡಿದ್ದಾರೆ. ರೈತರು ಸಹ ಗೌಡರು ಮಾಡಿದ ಕೆಲಸದಿಂದ ನೆಮ್ಮದಿಯಾಗಿ ಊಟ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕ್ಷೇತ್ರದಲ್ಲಿ ಜಾತಿಭೇದ ಮೆರೆತು ಜೆಡಿಎಸ್ಗೆ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.