ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಹಣ ಹಂಚಿ ಮತ ಖರೀದಿಸುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ ಆರೋಪ

Last Updated 27 ಅಕ್ಟೋಬರ್ 2021, 15:31 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಹಣ ಹಂಚಿ ಮತ ಖರೀದಿಸುವ ತಯಾರಿಯಲ್ಲಿದೆ ಎಂಬ ಸಂಶಯ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 'ಜೆಡಿಎಸ್ ಮಿಷನ್ 123' ತರಲು ಸಿಂದಗಿ, ಹಾನಗಲ್‌ ಉಪಚುನಾವಣೆ ವೇದಿಕೆಯಾಗಿದೆ ಎಂದು ಹೇಳಿದರು‌.

ದೇವೇಗೌಡರು ಸಿಂದಗಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ತಂದು ಉತ್ತಮ ಕೆಲಸ ಮಾಡಿದ್ದಾರೆ. ರೈತರು ಸಹ ಗೌಡರು ಮಾಡಿದ ಕೆಲಸದಿಂದ ನೆಮ್ಮದಿಯಾಗಿ ಊಟ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕ್ಷೇತ್ರದಲ್ಲಿ ಜಾತಿಭೇದ ಮೆರೆತು ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT