ನಗರದ ಬೈರೇಗೌಡ ಬಡಾವಣೆಯ ಬಳಿಯ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಿ ಸಾವಿರಾರು ಕುರ್ಚಿಗಳನ್ನು ಹಾಕಲಾಗಿತ್ತು. ನಗರದೆಲ್ಲೆಡೆ ಬಿಜೆಪಿ ಬಾವುಟಗಳು, ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿದ್ದವು. ಸಂಜೆ 5 ಗಂಟೆಗೆ ಪಕ್ಷದ ಸಾರ್ವಜನಿಕ ಸಭೆ ಆರಂಭವಾಗಬೇಕಿತ್ತು. ಆ ಸಮಯದಲ್ಲಿ ಜನರಿಲ್ಲದೆ ಕುರ್ಚಿಗಳು ಖಾಲಿ ಬಿದ್ದಿದ್ದವು. ಇತ್ತ ಯಾತ್ರೆಯೂ ನಿಗದಿಗಿಂತ ಎರಡು ಗಂಟೆ ತಡವಾಗಿತ್ತು.