ರಟ್ಟೀಹಳ್ಳಿ (ಹಾವೇರಿ ಜಿಲ್ಲೆ): ‘ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಎಮ್ಮೆ ಚರ್ಮದ್ದಲ್ಲ, ಘೇಂಡಾಮೃಗ ಚರ್ಮದ್ದು. ರೈತರ ಮತ್ತು ಸಾಮಾನ್ಯ ಜನರ ಕಷ್ಟ–ಸುಖ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಅನ್ನದಾತರ ಬಗ್ಗೆ ಈ ರೀತಿ ನಿರ್ಲಕ್ಷ್ಯ ತೋರಬಾರದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.