'ಗೋವಾ ರಾಜ್ಯದ ಫಲಿತಾಂಶ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಅಧಿಕಾರದ ಕನಸು ಕಂಡಿತ್ತು. ಕೂಸು ಹುಟ್ಟುವುದಕ್ಕೆ ಮುನ್ನವೇ ಕುಲಾವಿ ಹೊಲಿಸಲು ಹೋದ ಕಾಂಗ್ರೆಸ್ ಪಕ್ಷಕ್ಕೆ ಗೋವಾದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ಸಿಗರೇ, ಹಗಲು ಕನಸು ಕಾಣುವುದನ್ನು ನಿಲ್ಲಿಸಿ' ಎಂದು ಕರ್ನಾಟಕ ಬಿಜೆಪಿಯು ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರ ಚಿತ್ರದ ಜೊತೆಗೆ ಮತ್ತೊಂದು ಟ್ವೀಟ್ ಮಾಡಿದೆ.