ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣದ ಶಕುನಿ ಸಿದ್ದರಾಮಯ್ಯ: ಸಚಿವ ಬಿ. ಶ್ರೀರಾಮುಲು

ಸಿದ್ದರಾಮಯ್ಯ ನನ್ನಷ್ಟು ಹೃದಯವಂತನಲ್ಲ, ಅವರೊಬ್ಬ ಸಂಡೇ ಮಂಡೇ ಲಾಯರ್‌–ವಾಗ್ದಾಳಿ
Last Updated 16 ಅಕ್ಟೋಬರ್ 2022, 20:52 IST
ಅಕ್ಷರ ಗಾತ್ರ

ಬಳ್ಳಾರಿ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿ ಶಕುನಿ ಇದ್ದಂತೆ. ಜೆಡಿಎಸ್‌ಗೆ ಬೆಂಕಿ ಹಚ್ಚಿದ ಅವರೀಗ ಕಾಂಗ್ರೆಸ್‌ಗೆ ಬೆಂಕಿ ಹಚ್ಚಲು ಹೊರಟಿದ್ದಾರೆ’ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದರು.

‘ಸಚಿವ ಶ್ರೀರಾಮುಲು ಪೆದ್ದ, ಅವರಿಗೆ ಇತಿಹಾಸ ಗೊತ್ತಿಲ್ಲ. ಅವರಿಗೆ ಗಾಂಧಿ ಕುಟುಂಬದ ಬಗ್ಗೆ ಮಾತಾಡುವ ನೈತಿಕ ಹಕ್ಕಿಲ್ಲ’ ಎಂದು ಇಲ್ಲಿನ ಮುನ್ಸಿಪಲ್‌ ಮೈದಾನದಲ್ಲಿ ಶನಿವಾರ ಬಹಿರಂಗ ಸಭೆಯಲ್ಲಿ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಲು ಭಾನುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶ್ರೀರಾಮುಲು ಹರಿಹಾಯ್ದರು.

ಒಂದು ಹಂತದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಏಕವಚನ ಪ್ರಯೋಗವೂ ಆಯಿತು. ‘ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್‌. ಪಟೇಲ್‌, ಎಸ್‌.ಆರ್‌. ಬೊಮ್ಮಾಯಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್‌ ಮತ್ತಿತರರಿಗೆ ಬೆನ್ನಲ್ಲಿ ಚೂರಿ ಹಾಕಿದ ಸಿದ್ದರಾಮಯ್ಯ, ಈಗ ಡಿ.ಕೆ. ಶಿವಕುಮಾರ್‌ ಅವರನ್ನು ಮುಗಿಸಲು ಪಿತೂರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಡಿಕೆಶಿಗೆ ಸಿದ್ದು ಬ್ಲಾಕ್‌ಮೇಲ್‌’

‘ಸಿದ್ದರಾಮಯ್ಯ ಕೆಲ ದಾಖಲೆ ಇಟ್ಟುಕೊಂಡು ಡಿಕೆಶಿ ಅವರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ’ ಎಂದು ಶ್ರೀರಾಮುಲು ಹೇಳಿದರು.

‘ತಮ್ಮ ದಾರಿಗೆ ಶಿವಕುಮಾರ್‌ ಅಡ್ಡಿಯಾಗದಂತೆ ಸಿದ್ದರಾಮಯ್ಯ ತಡೆಯುತ್ತಿದ್ದಾರೆ. ನೀವು ಸಿಎಂ ಆಗಿದ್ದಾಗ ಎಸ್‌ಸಿ –ಎಸ್‌ಟಿ, ಪಂಗಡ ಮೀಸಲಾತಿ ಹೆಚ್ಚಳ ವಿಷಯ ಮುನ್ನೆಲೆಗೆ ಬಂದಿತ್ತು. ಆಗ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್‌ ಅವರಿಗೆ ಫೈಲ್‌ ಮುಚ್ಚಿಡುವಂತೆ ಹೇಳಲಿ ಲ್ಲವೇ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT