ಒಂದು ಹಂತದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಏಕವಚನ ಪ್ರಯೋಗವೂ ಆಯಿತು. ‘ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್. ಪಟೇಲ್, ಎಸ್.ಆರ್. ಬೊಮ್ಮಾಯಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಮತ್ತಿತರರಿಗೆ ಬೆನ್ನಲ್ಲಿ ಚೂರಿ ಹಾಕಿದ ಸಿದ್ದರಾಮಯ್ಯ, ಈಗ ಡಿ.ಕೆ. ಶಿವಕುಮಾರ್ ಅವರನ್ನು ಮುಗಿಸಲು ಪಿತೂರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.