ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಷಡ್ಯಂತ್ರಕ್ಕೆ ಉತ್ತರ ಕೊಡಬೇಕಾಗಿಲ್ಲ: ಅರುಣ್‌ ಸಿಂಗ್

Last Updated 3 ಮೇ 2022, 11:06 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್‌ ಷಡ್ಯಂತ್ರ ನಡೆಸಿದ್ದು, ಆ ಷಡ್ಯಂತ್ರಕ್ಕೆ ಅವರು ಉತ್ತರ ಕೊಡುವ ಅಗತ್ಯವಿಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್‌ ಪಕ್ಷದ ಹೆಸರೇ ಕಾನ್ಸ್‌ಸ್ಪಿರೆಸಿ ಪಾರ್ಟಿ, ಅಂದರೆ ಷಡ್ಯಂತ್ರ ಮಾಡುವ ಪಕ್ಷ. ಹೀಗಾಗಿ ಅಶ್ವತ್ಥನಾರಾಯಣ ಅವರ ವಿರುದ್ಧವೂ ಷಡ್ಯಂತ್ರ ಮಾಡಿದೆ. ಅದಕ್ಕೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದರು.

ಬಿಜೆಪಿ ಸಕಾರಾತ್ಮಕವಾಗಿ ಕಾರ್ಯನಿರ್ವಹಿಸುವ ಪಕ್ಷ. ಷಡ್ಯಂತ್ರದಲ್ಲಿ ತೊಡಗಿರುವ ಕಾಂಗ್ರೆಸ್‌ ದೇಶಾದ್ಯಂತ ನಾಶವಾಗಿದೆ ಎಂದು ಕಟಕಿಯಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT